Advertisement
ರಾಷ್ಟ್ರೀಯ

ಭಾರತದಲ್ಲಿ ತಾಳೆ ಎಣ್ಣೆ, ಚಿನ್ನದ ಮೂಲ ಆಮದು ಬೆಲೆ ಕಡಿತ | ಅಡುಗೆ ಎಣ್ಣೆ ದರ ಇಳಿಕೆಯಾಗುವ ಸಾಧ್ಯತೆ |

Share

ಭಾರತವು ಕಚ್ಚಾ ಮತ್ತು ಸಂಸ್ಕರಿಸಿದ ಪಾಮ್ ಆಯಿಲ್, ಕಚ್ಚಾ ಸೋಯಾ ತೈಲ ಮತ್ತು ಚಿನ್ನದ ಮೂಲ ಆಮದು ಬೆಲೆಗಳನ್ನು ಕಡಿತಗೊಳಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ.

2023 ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಅಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.ಈ ನಿಯಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ.

ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ ಖಾದ್ಯ ತೈಲಗಳು, ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಪರಿಷ್ಕರಿಸುತ್ತದೆ. ಭಾರತವು ಖಾದ್ಯ ತೈಲಗಳು ಮತ್ತು ಬೆಳ್ಳಿಯ ವಿಶ್ವದ ಅತಿದೊಡ್ಡ ಆಮದುದಾರ ಮತ್ತು ಚಿನ್ನದ ಎರಡನೇ ಅತಿ ದೊಡ್ಡ ಗ್ರಾಹಕ.  ಭಾರತದಲ್ಲಿ ಚಿನ್ನ, ಖಾದ್ಯ ತೈಲಗಳ ಬೆಲೆಯ ಮೇಲೆ ಈ ಆಮದು ದರವು ಪರಿಣಾಮ ಬೀರುತ್ತದೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಖಾದ್ಯ ತೈಲ ದರವು ಇತ್ತೀಚೆಗೆ ಜಾಗತಿಕವಾಗಿ ಕೊಂಚ ಇಳಿಕೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

4 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

8 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

9 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

9 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

9 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

10 hours ago