Advertisement
ರಾಷ್ಟ್ರೀಯ

ಭಾರತದಲ್ಲಿ ತಾಳೆ ಎಣ್ಣೆ, ಚಿನ್ನದ ಮೂಲ ಆಮದು ಬೆಲೆ ಕಡಿತ | ಅಡುಗೆ ಎಣ್ಣೆ ದರ ಇಳಿಕೆಯಾಗುವ ಸಾಧ್ಯತೆ |

Share

ಭಾರತವು ಕಚ್ಚಾ ಮತ್ತು ಸಂಸ್ಕರಿಸಿದ ಪಾಮ್ ಆಯಿಲ್, ಕಚ್ಚಾ ಸೋಯಾ ತೈಲ ಮತ್ತು ಚಿನ್ನದ ಮೂಲ ಆಮದು ಬೆಲೆಗಳನ್ನು ಕಡಿತಗೊಳಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ.

2023 ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಅಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.ಈ ನಿಯಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ.

ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ ಖಾದ್ಯ ತೈಲಗಳು, ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಪರಿಷ್ಕರಿಸುತ್ತದೆ. ಭಾರತವು ಖಾದ್ಯ ತೈಲಗಳು ಮತ್ತು ಬೆಳ್ಳಿಯ ವಿಶ್ವದ ಅತಿದೊಡ್ಡ ಆಮದುದಾರ ಮತ್ತು ಚಿನ್ನದ ಎರಡನೇ ಅತಿ ದೊಡ್ಡ ಗ್ರಾಹಕ.  ಭಾರತದಲ್ಲಿ ಚಿನ್ನ, ಖಾದ್ಯ ತೈಲಗಳ ಬೆಲೆಯ ಮೇಲೆ ಈ ಆಮದು ದರವು ಪರಿಣಾಮ ಬೀರುತ್ತದೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಖಾದ್ಯ ತೈಲ ದರವು ಇತ್ತೀಚೆಗೆ ಜಾಗತಿಕವಾಗಿ ಕೊಂಚ ಇಳಿಕೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 hour ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

6 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago