ಭಾರತವು ಕಚ್ಚಾ ಮತ್ತು ಸಂಸ್ಕರಿಸಿದ ಪಾಮ್ ಆಯಿಲ್, ಕಚ್ಚಾ ಸೋಯಾ ತೈಲ ಮತ್ತು ಚಿನ್ನದ ಮೂಲ ಆಮದು ಬೆಲೆಗಳನ್ನು ಕಡಿತಗೊಳಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ.
2023 ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಅಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.ಈ ನಿಯಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ.
ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ ಖಾದ್ಯ ತೈಲಗಳು, ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಪರಿಷ್ಕರಿಸುತ್ತದೆ. ಭಾರತವು ಖಾದ್ಯ ತೈಲಗಳು ಮತ್ತು ಬೆಳ್ಳಿಯ ವಿಶ್ವದ ಅತಿದೊಡ್ಡ ಆಮದುದಾರ ಮತ್ತು ಚಿನ್ನದ ಎರಡನೇ ಅತಿ ದೊಡ್ಡ ಗ್ರಾಹಕ. ಭಾರತದಲ್ಲಿ ಚಿನ್ನ, ಖಾದ್ಯ ತೈಲಗಳ ಬೆಲೆಯ ಮೇಲೆ ಈ ಆಮದು ದರವು ಪರಿಣಾಮ ಬೀರುತ್ತದೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಖಾದ್ಯ ತೈಲ ದರವು ಇತ್ತೀಚೆಗೆ ಜಾಗತಿಕವಾಗಿ ಕೊಂಚ ಇಳಿಕೆಯಾಗುತ್ತಿದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…