Advertisement
MIRROR FOCUS

ಭಾರತ- ದಕ್ಷಿಣ ಆಫ್ರಿಕಾ ಹೈ ವೋಲ್ಟೇಜ್‌ ಪಂದ್ಯ | ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆಮಾಡಿಕೊಂಡ ಭಾರತ | ಉಭಯ ತಂಡಗಳು ವಿವರ

Share

ಭಾರತ ಹಾಗೂ ದಕ್ಷಣ ಆಫ್ರಿಕಾ ಹೈ ವೋಲ್ಟೇಜ್‌ ಮ್ಯಾಚ್‌ ಆರಂಭವಾಗಿದೆ. ಮೊದಲೆರಡು ಓವರರ್ಗಳಲ್ಲಿ ಭಾರತ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದೆ. ಇದೀಗ 15 ಒವರ್‌ನಲ್ಲಿ 107 ರನ್ ಗಳಿಸಿದ್ದು ಎರಡು ವಿಕೆಟ್‌ ಪತನವಾಗಿದೆ.

ಕೋಲ್ಕತ್ತಾದ(Kolkata) ವಾಂಖೆಡೆ ಸ್ಟೇಡಿಯಂ(Vankade Stadium)ನಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಲುಂಗಿ ಎನ್​ಗಿಡಿ.

ಸಮಕಾಲೀನ ಕ್ರಿಕೆಟ್‌ ಜಗತ್ತಿನ ಅತ್ಯಂತ ಯಶಸ್ವಿ ಬ್ಯಾಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಇಂದು 35ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಜೀವನದ ಆರಂಭಿಕ ಕಾಲಘಟ್ಟದಲ್ಲಿ ಸಾಕಷ್ಟು ವೈಫಲ್ಯಗಳನ್ನು ಎದುರಿಸಿ ಇಂದು ವಿಶ್ವದ ಶ್ರೇಷ್ಠ ಕ್ರಿಕೆಟಿಗನಾಗಿ ಗುರುತಿಸಿಕೊಂಡಿರುವ ಕಿಂಗ್ ಕೊಹ್ಲಿಗೆ ಜನ್ಮದಿನದ ಪ್ರಯುಕ್ತ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದರ ಜೊತೆಗೆ ಇಂದು ಕೋಲ್ಕತ್ತಾದಲ್ಲಿ ಭಾರತ-ದಕ್ಷಿಣ ಆಫ್ರಿಕಾ ವಿಶ್ವಕಪ್ ಪಂದ್ಯ ಕೂಡ ನಡೆಯಲಿದ್ದು, ಈಡನ್ ಗಾರ್ಡನ್ಸ್​ಗೆ ಕೊಹ್ಲಿಯ ಮುಖವಾಡ ಧರಿಸಿ ಫ್ಯಾನ್ಸ್ ಬರುತ್ತಿದ್ದಾರೆ. ಸ್ಟೇಡಿಯಂನ ಹೊರಗಡೆ ಕೊಹ್ಲಿಯ ನಾಮಜಪ ಜೋರಾಗಿ ಕೇಳಿಬರುತ್ತಿದ್ದು, ವಿಡಿಯೋ ಸಖತ್ ವೈರಲ್ ಆಗುತ್ತಿದೆ.

– ಅಂತರ್ಜಾಲ ಮಾಹಿತಿ

Team India is facing the team of South Africa in the ongoing World Cup match at the Wankhede Stadium in Kolkata. Now the toss of this match has also been held and Team India captain Rohit Sharma who won the toss has decided to bat first. So South Africa will bowl first after losing the toss.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago