Advertisement
ವಿಶೇಷ ವರದಿಗಳು

ಆಹಾರ ಭದ್ರತೆ | ಸಹಕಾರಿ ಕ್ಷೇತ್ರದಲ್ಲಿ ವಿಶ್ವದ ಅತಿದೊಡ್ಡ ಆಹಾರಧಾನ್ಯ ಸಂಗ್ರಹ ಯೋಜನೆಗೆ ಕೇಂದ್ರ ಅನುಮೋದನೆ |

Share

 ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ  ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್‌ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

Advertisement
Advertisement

ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್​ನಲ್ಲೂ 2000 ಟನ್​ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್​ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್‌ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.

ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್​ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago