ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್ನಲ್ಲೂ 2000 ಟನ್ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.
ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…