ವಿಶೇಷ ವರದಿಗಳು

ಆಹಾರ ಭದ್ರತೆ | ಸಹಕಾರಿ ಕ್ಷೇತ್ರದಲ್ಲಿ ವಿಶ್ವದ ಅತಿದೊಡ್ಡ ಆಹಾರಧಾನ್ಯ ಸಂಗ್ರಹ ಯೋಜನೆಗೆ ಕೇಂದ್ರ ಅನುಮೋದನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ  ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್‌ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

Advertisement

ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್​ನಲ್ಲೂ 2000 ಟನ್​ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್​ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್‌ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.

ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್​ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

5 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

5 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

12 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

19 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

19 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

19 hours ago