Advertisement
ವಿಶೇಷ ವರದಿಗಳು

ಆಹಾರ ಭದ್ರತೆ | ಸಹಕಾರಿ ಕ್ಷೇತ್ರದಲ್ಲಿ ವಿಶ್ವದ ಅತಿದೊಡ್ಡ ಆಹಾರಧಾನ್ಯ ಸಂಗ್ರಹ ಯೋಜನೆಗೆ ಕೇಂದ್ರ ಅನುಮೋದನೆ |

Share

 ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ  ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್‌ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

Advertisement

ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್​ನಲ್ಲೂ 2000 ಟನ್​ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್​ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್‌ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.

ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್​ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

57 minutes ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

8 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

8 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago