ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್ನಲ್ಲೂ 2000 ಟನ್ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.
ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…