Advertisement
ವಿಶೇಷ ವರದಿಗಳು

ಆಹಾರ ಭದ್ರತೆ | ಸಹಕಾರಿ ಕ್ಷೇತ್ರದಲ್ಲಿ ವಿಶ್ವದ ಅತಿದೊಡ್ಡ ಆಹಾರಧಾನ್ಯ ಸಂಗ್ರಹ ಯೋಜನೆಗೆ ಕೇಂದ್ರ ಅನುಮೋದನೆ |

Share

 ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ  ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್‌ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್​ನಲ್ಲೂ 2000 ಟನ್​ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್​ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್‌ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.

ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್​ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

4 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago