Advertisement
ವಿಶೇಷ ವರದಿಗಳು

ಆಹಾರ ಭದ್ರತೆ | ಸಹಕಾರಿ ಕ್ಷೇತ್ರದಲ್ಲಿ ವಿಶ್ವದ ಅತಿದೊಡ್ಡ ಆಹಾರಧಾನ್ಯ ಸಂಗ್ರಹ ಯೋಜನೆಗೆ ಕೇಂದ್ರ ಅನುಮೋದನೆ |

Share

 ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ  ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್‌ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್​ನಲ್ಲೂ 2000 ಟನ್​ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್​ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್‌ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.

ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್​ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

15 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

15 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago