Advertisement
ವಿಶೇಷ ವರದಿಗಳು

ಆಹಾರ ಭದ್ರತೆ | ಸಹಕಾರಿ ಕ್ಷೇತ್ರದಲ್ಲಿ ವಿಶ್ವದ ಅತಿದೊಡ್ಡ ಆಹಾರಧಾನ್ಯ ಸಂಗ್ರಹ ಯೋಜನೆಗೆ ಕೇಂದ್ರ ಅನುಮೋದನೆ |

Share

 ಒಂದು ಕಡೆ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ ಉಚಿತ ಕೊಡುಗೆಗಳ ಮೂಲಕ ಸರ್ಕಾರಗಳು ಗಮನ ಸೆಳೆದರೆ ಇನ್ನೊಂದು ಕಡೆ ಆಹಾರ ಭದ್ರತೆ ಕಡೆಗೂ ಸರ್ಕಾರಗಳು ಯೋಚನೆ ಹಾಗೂ ಯೋಜನೆ ರೂಪಿಸುತ್ತಿದೆ. ಇದೀಗ  ಸಹಕಾರಿ ಕ್ಷೇತ್ರದಲ್ಲಿ ಆಹಾರ ಧಾನ್ಯ ಸಂಗ್ರಹ ಸಾಮರ್ಥ್ಯವನ್ನು 70 ದಶಲಕ್ಷ ಟನ್‌ಗಳಷ್ಟು ಹೆಚ್ಚಿಸುವ ₹ 1 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

Advertisement
Advertisement

ಮುಂದಿನ 5 ವರ್ಷಗಳಲ್ಲಿ ಅಳವಡಿಕೆ ಆಗುವ ಈ ಯೋಜನೆಯಲ್ಲಿ ದೇಶದ ಪ್ರತಿಯೊಂದು ಬ್ಲಾಕ್​ನಲ್ಲೂ 2000 ಟನ್​ಗಳಷ್ಟು ಆಹಾರಧಾನ್ಯ ಸಂಗ್ರಹ ಸಾಮರ್ಥ್ಯ ಇರುವ ಗೋಡೌನ್​ಗಳನ್ನು ನಿರ್ಮಿಸುವ ಪ್ಲಾನ್ ಇದೆ. ಇದಕ್ಕಾಗಿ ಅಂತರ್–ಸಚಿವೀಯ ಸಮಿತಿಯನ್ನು ರಚಿಸಲಾಗುತ್ತದೆ.ಈ ಯೋಜನೆಯು ಸಹಕಾರಿ ಸಂಸ್ಥೆಗಳಿಗೆ ದೇಶಾದ್ಯಂತ ವಿಕೇಂದ್ರೀಕೃತ ಶೇಖರಣಾ ಸೌಲಭ್ಯಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ, ಈ ವ್ಯವಸ್ಥೆ ಮೂಲಕ ಫುಡ್ ಕಾರ್ಪ್ ಆಫ್ ಇಂಡಿಯಾ (ಎಫ್‌ಸಿಐ) ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಕೃಷಿ ಉತ್ಪನ್ನಗಳ ನಷ್ಟವನ್ನು ಕಡಿಮೆ ಮಾಡುತ್ತದೆ.

Advertisement

ರೈತರು ಬೆಳೆಯುವ ಆಹಾರಧಾನ್ಯ ಅಥವಾ ಇನ್ಯಾವುದೇ ಬೆಳೆಯಾಗಲೀ ಸ್ವಾಭಾವಿಕವಾಗಿ ಹೆಚ್ಚು ದಿನ ಬರುವುದಿಲ್ಲ. ಇವುಗಳನ್ನು ಹೆಚ್ಚು ದಿನ ಸಂಗ್ರಹಿಸಿ ಇಟ್ಟುಕೊಳ್ಳಲು ಉಗ್ರಾಣಗಳು, ಸಂಗ್ರಹಗಾರಗಳು, ಕೋಲ್ಡ್ ಸ್ಟೋರೇಜ್​ಗಳು ಇತ್ಯಾದಿ ವ್ಯವಸ್ಥೆ ಬೇಕು. ಆಹಾರಧಾನ್ಯಗಳನ್ನು ಕೆಡದಂತೆ ಹೆಚ್ಚು ದಿನ ಇಟ್ಟುಕೊಳ್ಳುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತದೆ. ಪಡಿತರ ವಿತರಣೆಗೆ ಅನುಕೂಲವಾಗುತ್ತದೆ. ಯಾವುದಾದರೂ ಆಹಾರಧಾನ್ಯದ ಕೊರತೆ ಉಂಟಾದಾಗ ಸಂಗ್ರಹಾಗಾರಗಳಿಂದ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದು. ಇದರಿಂದ ಆ ಆಹಾರಧಾನ್ಯದ ಬೆಲೆ ವಿಪರೀತ ಏರಿಕೆಯಾಗುವುದನ್ನು ಅಥವಾ ಆಮದು ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

12 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

12 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

17 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

17 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

18 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

19 hours ago