#IndianEconomy | 2075 ರೊಳಗೆ ಭಾರತವೇ ಶ್ರೀಮಂತ ದೇಶ | ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ – ಗೋಲ್ಡ್​ಮನ್ ಸ್ಯಾಕ್ಸ್ ಅಭಿಪ್ರಾಯ |

July 11, 2023
12:58 PM
2075ಕ್ಕೆ ಭಾರತದ ಆರ್ಥಿಕತೆ 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ, ಆ ಸಂದರ್ಭ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ.

ಭಾರತ ಅನಾದಿ ಕಾಲದಿಂದಲೂ ಶ್ರೀಮಂತ ದೇಶ. ಆದರೆ ಅಮೇರಿಕ, ಜಪಾನ್, ಜರ್ಮ‍ನಿ ಸೂಪರ್ ಪವರ್ ದೇಶಗಳು. ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳು ಎಂದು ಹೇಳುತ್ತಾರೆ. ಈಗ ಪರಿಸ್ಥಿತಿ ಹಾಗಿಲ್ಲ. ಇನ್ನು ಐದು ದಶಕದಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ವಿಶ್ವದ ಪ್ರಮುಖ ಹೂಡಿಕೆ ಬ್ಯಾಂಕ್ ಎನಿಸಿದ ಗೋಲ್ಡ್​ಮನ್ ಸ್ಯಾಕ್ಸ್ #GoldmanSachs ಅಭಿಪ್ರಾಯಪಟ್ಟಿದೆ.

Advertisement
Advertisement

2075ಕ್ಕೆ ಭಾರತದ ಆರ್ಥಿಕತೆ #IndianEconomy 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ. ಸದ್ಯ ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್​ಗಿಂತ ತುಸು ಹೆಚ್ಚು ಇದೆ. ಐವತ್ತು ವರ್ಷದಲ್ಲಿ ಆರ್ಥಿಕತೆ 17 ಪಟ್ಟು ಹೆಚ್ಚು ಬೆಳೆಯುತ್ತದೆ. 52.5 ಟ್ರಿಲಿಯನ್ ಡಾಲರ್ ಎಂದರೆ ಸುಮಾರು 4,325 ಲಕ್ಷ ಕೋಟಿ ರೂಪಾಯಿ ಆಗುತ್ತದೆ.

Advertisement

ಮೊನ್ನೆ ಇನ್ವೆಸ್ಕೋ ಸಂಸ್ಥೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಜಗತ್ತಿನ ಹೂಡಿಕೆದಾರರಿಗೆ ಭಾರತವೇ ಆದ್ಯತಾ ದೇಶವಾಗಿದೆ. 85 ಸಾವರೀನ್ ವೆಲ್ತ್ ಫಂಡ್ ಮತ್ತು 57 ಸೆಂಟ್ರಲ್ ಬ್ಯಾಂಕುಗಳು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೂಡಿಕೆದಾರರು ಚೀನಾಗಿಂತ ಭಾರತದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದ್ದಾರಂತೆ.

(ಕೃಪೆ : ಅಂತರ್ಜಾಲ )

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror