ದೇಶದ ಪ್ರಗತಿಗೆ ಕೃಷಿ ಸಾಮರ್ಥ್ಯವೇ ಆಧಾರ – ರೈತರ ಹಕ್ಕುಗಳಲ್ಲಿ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ – ಪ್ರಧಾನಿ ನರೇಂದ್ರ ಮೋದಿ

August 7, 2025
10:58 PM

ದೇಶವು ರೈತರ ಹಿತಾಸಕ್ತಿಯೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು, ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿ ವೆಚ್ಚಗಳನ್ನು ತಗ್ಗಿಸಲು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆಹಾರ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿಸುವ ಆಂದೋಲನವನ್ನು ಡಾ. ಸ್ವಾಮಿನಾಥನ್ ಅವರು ಮುನ್ನಡೆಸಿದ್ದರು. ಅವರ ಆಲೋಚನೆಗಳು ಭಾರತದ ಕೃಷಿ ವಲಯದಲ್ಲಿ ಇಂದಿಗೂ ಪ್ರಸ್ತುತವಾಗಿದ್ದು, ಅವುಗಳನ್ನು ಆಧರಿಸಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸುತ್ತಿದೆ ಎಂದರು. ರೈತರು, ಪಶುಪಾಲಕರು, ಮೀನುಗಾರರು, ಹೈನುಗಾರರು ಸೇರಿದಂತೆ ಎಲ್ಲಾ ಕೃಷಿ ಪೂರಕ ವರ್ಗದವರ ಹಿತ ಕಾಯುವುದು ತಮ್ಮ ಸರ್ಕಾರದ ಮೊದಲ  ಆದ್ಯತೆಯಾಗಿದೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದರು. ದೇಶದ ಪ್ರಗತಿಗೆ ಕೃಷಿ ಸಾಮರ್ಥ್ಯವೇ ಆಧಾರ. ನಮ್ಮ ರೈತರ ಬಳಿ ಪಾರಂಪರಿಕ ಕೃಷಿಯ ಜ್ಞಾನ ಭಂಡಾರವಿದ್ದು, ಅದನ್ನು ಬಳಸಿಕೊಂಡು ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು ನೀಡುವ ತುರ್ತು ಅಗತ್ಯವಿದೆ. ಆಹಾರ ಭದ್ರತೆ ಜೊತೆಗೆ ಪೌಷ್ಠಿಕ ಭದ್ರತೆಗೂ ಒತ್ತು ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಕಾರ್ಯೋನ್ಮುಖವಾಗಿ ಇದೀಗ ಎಲ್ಲಾ ಹವಾಮಾನಗಳನ್ನು ಎದುರಿಸುವಂತಹ ಸಾಮರ್ಥ್ಯವಿರುವ ತಳಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ರೈತರು ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.    ಪ್ರೊ. ಎಂ.ಎಸ್. ಸ್ವಾಮಿನಾಥನ್ ಅವರನ್ನು ತಾವು ಭೇಟಿಯಾಗಿದ್ದು, ಅದೊಂದು ಅಮೂಲ್ಯವಾದ ಕಲಿಕಾ ಅನುಭವವಾಗಿತ್ತು. ಕೃಷಿ ವಿಜ್ಞಾನದಲ್ಲಿ ಅವರ ಪರಿವರ್ತನಾತ್ಮಕ ಕಾರ್ಯವನ್ನು ಇಂದಿಗೂ ವ್ಯಾಪಕವಾಗಿ ಮೆಚ್ಚಲಾಗುತ್ತಿದೆ. ಅಂತಹ ಸಾಧಕರನ್ನು ಭಾರತರತ್ನದೊಂದಿಗೆ ಗೌರವಿಸುವ ಅವಕಾಶ ನಮ್ಮ ಸರ್ಕಾರಕ್ಕೆ ಸಿಕ್ಕಿದೆ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror