Advertisement
MIRROR FOCUS

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

Share

ಭಾರತೀಯ ಸೇನಾ ಪಡೆಗಳು ನಡೆಸಿದ ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಬದಲಾಗಿ ಅದು ದೇಶದ ಜನರ ಸಾಮೂಹಿಕ ಭಾವನೆಗಳು ಮತ್ತು ವಿರೋಧದ ಪ್ರಬಲ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ.…..ಮುಂದೆ ಓದಿ….

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಸಶಸ್ತ್ರ ಪಡೆಗಳು, ಮಿಲಿಟರಿ, ಗುಪ್ತಚರ ಸಂಸ್ಥೆಗಳು ಮತ್ತು ವಿಜ್ಞಾನಿಗಳಿಗೆ ಆಪರೇಷನ್ ಸಿಂದೂರ್ ಕಾರ್ಯದಲ್ಲಿ ಯಶಸ್ಸು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಭಾರತವು  ಬೃಹತ್ ಪ್ರಮಾಣದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಪಡಿಸಿದೆ. ಆದ್ದರಿಂದ, ಯಾವುದೇ ಭಯೋತ್ಪಾದನೆ ನಿಗ್ರಹ ಮಾಡಲು ಭಾರತ ಹಿಂಜರಿಯುವುದಿಲ್ಲ, ಭಯೋತ್ಪಾದನೆ ನಿಗ್ರಹಕ್ಕೆ ನಮ್ಮ ಆಪರೇಷನ್ ಸಿಂದೂರ್ ಮುಂದುವರಿಯುತ್ತದೆ ಎಂದರು.ಸದ್ಯ  ಕಾರ್ಯಾಚರಣೆಯು ಸ್ಥಗಿತಗೊಂಡಿರುವುದರಿಂದ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಜಾಗರೂಕರಾಗಿರುವ ಈಗ ನೀಡಿರುವ  ಭರವಸೆಗಳೊಂದಿಗೆ ಭಾರತವು ಪಾಕಿಸ್ತಾನದ ಕ್ರಮಗಳನ್ನು ಗಮನಿಸುತ್ತದೆ, ತಂಟೆಗೆ ಬಂದರೆ ಸುಮ್ಮನೆ ಇರುವುದಿಲ್ಲ ಎಂದರು. ಭಾರತವು ಭಯೋತ್ಪಾದನೆಗೆ ಪ್ರತಿಕ್ರಿಯಿಸುತ್ತದೆ, ಆದರೆ ಪರಮಾಣು ಬ್ಲ್ಯಾಕ್‌ಮೇಲ್ ಅನ್ನು ಸಹಿಸುವುದಿಲ್ಲ, ಭಯೋತ್ಪಾದನೆಯ ನಿಗ್ರಹಕ್ಕೆ ಭಾರತವು ದಾಳಿ ಮಾಡುತ್ತದೆ ಮತ್ತು ಭಯೋತ್ಪಾದಕ ಮುಖ್ಯಸ್ಥರು ಮತ್ತು ಅವರ ಬೆಂಬಲಿಗರನ್ನು ಕೂಡಾ ಮುಗಿಸಲು ಹಿಂದೇಟು ಹಾಕುವುದಿಲ್ಲ ಎಂದರು.

ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳನ್ನು ನಾಶಪಡಿಸಬೇಕು ಇಲ್ಲದಿದ್ದರೆ ಅವರಿಗೆ ಯಾವುದೇ ಅನ್ಯ ಮಾರ್ಗವಿಲ್ಲ ಎಂದು  ಮೋದಿ ಹೇಳಿದರು. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ ಇರುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು. ಭಯೋತ್ಪಾದನೆ, ವ್ಯಾಪಾರ ಮತ್ತು ಮಾತುಕತೆಗಳನ್ನು ಒಟ್ಟಿಗೆ ಮಾಡಲು ಸಾಧ್ಯವಿಲ್ಲ ಎಂಬುದು ಭಾರತದ ನಿಲುವು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ಸೇನೆ ಮತ್ತು ಪಾಕಿಸ್ತಾನ ಸರ್ಕಾರವು ಭಯೋತ್ಪಾದನೆಯನ್ನು ಪೋಷಿಸುವುದನ್ನು ಮುಂದುವರಿಸಿದರೆ, ಒಂದು ದಿನ ಅದು ಪಾಕಿಸ್ತಾನದ ಸ್ವಂತ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

10 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

14 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

18 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago