Advertisement
MIRROR FOCUS

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

Share

ಭಾರತೀಯ ಸೇನಾ ಪಡೆಗಳು ನಡೆಸಿದ ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಬದಲಾಗಿ ಅದು ದೇಶದ ಜನರ ಸಾಮೂಹಿಕ ಭಾವನೆಗಳು ಮತ್ತು ವಿರೋಧದ ಪ್ರಬಲ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ.…..ಮುಂದೆ ಓದಿ….

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಸಶಸ್ತ್ರ ಪಡೆಗಳು, ಮಿಲಿಟರಿ, ಗುಪ್ತಚರ ಸಂಸ್ಥೆಗಳು ಮತ್ತು ವಿಜ್ಞಾನಿಗಳಿಗೆ ಆಪರೇಷನ್ ಸಿಂದೂರ್ ಕಾರ್ಯದಲ್ಲಿ ಯಶಸ್ಸು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಭಾರತವು  ಬೃಹತ್ ಪ್ರಮಾಣದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಪಡಿಸಿದೆ. ಆದ್ದರಿಂದ, ಯಾವುದೇ ಭಯೋತ್ಪಾದನೆ ನಿಗ್ರಹ ಮಾಡಲು ಭಾರತ ಹಿಂಜರಿಯುವುದಿಲ್ಲ, ಭಯೋತ್ಪಾದನೆ ನಿಗ್ರಹಕ್ಕೆ ನಮ್ಮ ಆಪರೇಷನ್ ಸಿಂದೂರ್ ಮುಂದುವರಿಯುತ್ತದೆ ಎಂದರು.ಸದ್ಯ  ಕಾರ್ಯಾಚರಣೆಯು ಸ್ಥಗಿತಗೊಂಡಿರುವುದರಿಂದ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಜಾಗರೂಕರಾಗಿರುವ ಈಗ ನೀಡಿರುವ  ಭರವಸೆಗಳೊಂದಿಗೆ ಭಾರತವು ಪಾಕಿಸ್ತಾನದ ಕ್ರಮಗಳನ್ನು ಗಮನಿಸುತ್ತದೆ, ತಂಟೆಗೆ ಬಂದರೆ ಸುಮ್ಮನೆ ಇರುವುದಿಲ್ಲ ಎಂದರು. ಭಾರತವು ಭಯೋತ್ಪಾದನೆಗೆ ಪ್ರತಿಕ್ರಿಯಿಸುತ್ತದೆ, ಆದರೆ ಪರಮಾಣು ಬ್ಲ್ಯಾಕ್‌ಮೇಲ್ ಅನ್ನು ಸಹಿಸುವುದಿಲ್ಲ, ಭಯೋತ್ಪಾದನೆಯ ನಿಗ್ರಹಕ್ಕೆ ಭಾರತವು ದಾಳಿ ಮಾಡುತ್ತದೆ ಮತ್ತು ಭಯೋತ್ಪಾದಕ ಮುಖ್ಯಸ್ಥರು ಮತ್ತು ಅವರ ಬೆಂಬಲಿಗರನ್ನು ಕೂಡಾ ಮುಗಿಸಲು ಹಿಂದೇಟು ಹಾಕುವುದಿಲ್ಲ ಎಂದರು.

ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳನ್ನು ನಾಶಪಡಿಸಬೇಕು ಇಲ್ಲದಿದ್ದರೆ ಅವರಿಗೆ ಯಾವುದೇ ಅನ್ಯ ಮಾರ್ಗವಿಲ್ಲ ಎಂದು  ಮೋದಿ ಹೇಳಿದರು. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ ಇರುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು. ಭಯೋತ್ಪಾದನೆ, ವ್ಯಾಪಾರ ಮತ್ತು ಮಾತುಕತೆಗಳನ್ನು ಒಟ್ಟಿಗೆ ಮಾಡಲು ಸಾಧ್ಯವಿಲ್ಲ ಎಂಬುದು ಭಾರತದ ನಿಲುವು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ಸೇನೆ ಮತ್ತು ಪಾಕಿಸ್ತಾನ ಸರ್ಕಾರವು ಭಯೋತ್ಪಾದನೆಯನ್ನು ಪೋಷಿಸುವುದನ್ನು ಮುಂದುವರಿಸಿದರೆ, ಒಂದು ದಿನ ಅದು ಪಾಕಿಸ್ತಾನದ ಸ್ವಂತ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 hour ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

16 hours ago