Advertisement
ಸುದ್ದಿಗಳು

2019-20 ರಲ್ಲಿ ದೇಶದ ಜಿಡಿಪಿಯ ಶೇಕಡಾ 50 ಗ್ರಾಮೀಣ ಆರ್ಥಿಕತೆಯ ಕೊಡುಗೆ | ಕೃಷಿ, ಗ್ರಾಮೀಣ ಆರ್ಥಿಕತೆ ಸುಧಾರಣೆ ಸಕಾಲ |

Share

ಗ್ರಾಮೀಣ ಆರ್ಥಿಕತೆ ದೇಶದ ಆರ್ಥಿಕತೆಯ ಮೇಲೆ ಹೆಚ್ಚು ಪರಿಣಾಮ ಬೀರುವುದು ಕಳೆದ ಕೆಲವು ವರ್ಷಗಳಿಂದ ಅರಿವಿಗೆ ಬರುತ್ತಿದೆ. ಇದೀಗ ಕೊರೋನಾ ನಂತರ ಅತ್ಯಂತ ಸ್ಪಷ್ಟವಾಗಿ ಕಂಡುಬಂದಿದ್ದು 2019-20 ರಲ್ಲಿ ಇಡೀ ದೇಶದ ಜಿಡಿಪಿಯ ಶೇ.50  ರಷ್ಟು ಗ್ರಾಮೀಣ ಆರ್ಥಿಕತೆ ಇರುವ ಬಗ್ಗೆ ಆರ್ಥಿಕ ಸಮೀಕ್ಷೆಯ ಅಧ್ಯಯನ ವರದಿಯೊಂದು ತಿಳಿಸಿದೆ. ಹೀಗಾಗಿ ಈಗ ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಸೂಕ್ತವಾದ ಕ್ರಮಗಳ ಅಗತ್ಯವಿದೆ. ಈ ಮೂಲಕ ದೇಶದ ಜಿಡಿಪಿ ಸ್ಥಿರತೆಯತ್ತ ಕೊಂಡೊಯ್ಯಲು ಸಕಾಲಿಕವಾಗಿ ಕೆಲಸ ಮಾಡಬೇಕಾಗಿದೆ ಎಂದು ವರದಿಗಳು ಎಚ್ಚರಿಸಿದೆ.

ಕೃಷಿ ವಲಯವು 2015 ಮತ್ತು 2020 ರ ನಡುವೆ ಶೇಕಡಾ 11 ರಷ್ಟು ಸಿಎಜಿಆರ್‌(Compound Annual Growth Rate) ನಿಂದ ಬೆಳೆದಿದೆ. 2019-20 ರಲ್ಲಿ ಒಟ್ಟು ಗ್ರಾಮೀಣ ಜಿಡಿಪಿಯ ಅದರಲ್ಲೂ  ಗ್ರಾಮೀಣ ಆರ್ಥಿಕತೆಯಲ್ಲಿ ಕೃಷಿಯು ಅತಿದೊಡ್ಡ ಉಪ-ವಲಯವಾಗಿ ಕಂಡುಬಂದಿದೆ. ಅಂದರೆ ಕೃಷಿ ವಲಯವು ಈಚೆಗೆ ಶೇ.11 ರಷ್ಟು ಏರಿಕೆ ಕಂಡಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ. 2020-21 ರಲ್ಲಿ ಸ್ಥಿರ ಬೆಲೆಯಲ್ಲಿ ಹಾಗೂ ಗುಣಾತ್ಮಕ  ಬೆಳವಣಿಗೆಯನ್ನು ಸಾಧಿಸಿದ ಏಕೈಕ ಕ್ಷೇತ್ರವೆಂದರೆ ಕೃಷಿ. 2020-2021 ರ ಆರ್ಥಿಕ ಸಮೀಕ್ಷೆಯ ಪ್ರಕಾರ, ಒಟ್ಟು ದೇಶೀಯ ಉತ್ಪನ್ನದಲ್ಲಿ (ಜಿಡಿಪಿ) ಕೃಷಿಯ ಪಾಲು ಮಾತ್ರವೇ ಕಳೆದ 17 ವರ್ಷಗಳಲ್ಲಿ ಮೊದಲ ಬಾರಿಗೆ ಸುಮಾರು 20 ಶೇಕಡಾವನ್ನು ತಲುಪಿದೆ. 2020-21 ರ ಒಂದೇ ವರ್ಷದಲ್ಲಿ ಸ್ಥಿರ ಬೆಲೆಯಲ್ಲಿ ಕೃಷಿ ಕ್ಷೇತ್ರವು ಶೇಕಡಾ 3.4 ರಷ್ಟು ಏರಿಕೆ ಕಂಡಿದೆ. ಇತರೆಲ್ಲಾ ಕ್ಷೇತ್ರಗಳೂ ಕುಸಿತ ಕಂಡಿದ್ದು. ಜಿಡಿಪಿಯಲ್ಲಿ ಕೃಷಿಯ ಪಾಲು 2019-20ರಲ್ಲಿ ಶೇ 17.8 ರಿಂದ 2020-21ರಲ್ಲಿ ಶೇ 19.9ಕ್ಕೆ ಏರಿಕೆಯಾಗಿದೆ. ಕೃಷಿ ಕ್ಷೇತ್ರದ ಬೆಳವಣಿಗೆಯ ಕಾರಣದಿಂದ ದೇಶದ ಗ್ರಾಮೀಣ ಆರ್ಥಿಕತೆ ಬೆಳೆಯಿತು, ಗ್ರಾಮೀಣ ಭಾಗವು ಮೂಲಭೂತ ವ್ಯವಸ್ಥೆಗಳ ಕೊರತೆ ನಡುವೆಯೂ ಆರ್ಥಿಕತೆಯಲ್ಲಿ ಗಟ್ಟಿಯಾಗಿತ್ತು ಎಂದು ಸಮೀಕ್ಷಾ ವರದಿ ಹೇಳಿದೆ.

Advertisement

ಕೃಷಿ ಸರಕುಗಳ ನಿರಂತರ ಪೂರೈಕೆ, ವಿಶೇಷವಾಗಿ ಅಕ್ಕಿ, ಗೋಧಿ, ಬೇಳೆಕಾಳುಗಳು ಮತ್ತು ತರಕಾರಿಗಳಂತಹ ಪ್ರಧಾನ ಆಹಾರಗಳು ಸಹ ಆಹಾರ ಭದ್ರತೆಯನ್ನು ಗಟ್ಟಿಗೊಳಿಸಿದ್ದವು. 2019-20 ರಲ್ಲಿ ದೇಶದಲ್ಲಿ ಒಟ್ಟು ಆಹಾರ ಧಾನ್ಯ ಉತ್ಪಾದನೆ 296.65 ಮಿಲಿಯನ್ ಟನ್ ಆಗಿತ್ತು. ಅಂದರೆ 2018-19 ಕ್ಕಿಂತ 11.44 ಮಿಲಿಯನ್ ಟನ್‌ಗಳಷ್ಟು ಹೆಚ್ಚಾಗಿದೆ. ಇದು ಹಿಂದಿನ ಐದು ವರ್ಷಗಳ ಅಂದರೆ 2014-15 ರಿಂದ 2018-19 ರ ಸರಾಸರಿ ಉತ್ಪಾದನೆ 269.78 ಮಿಲಿಯನ್ ಟನ್‌. ಅಂದರೆ ಒಂದೇ ವರ್ಷ 26.87 ಮಿಲಿಯನ್ ಟನ್‌ಗಳಷ್ಟು ಹೆಚ್ಚಾಗಿದೆ.

ಈಚೆಗೆ ಹೊಸ ಪೀಳಿಗೆಯ ರೈತರು, ಯುವ ಕೃಷಿಕರು ತಾಂತ್ರಿಕವಾಗಿ ಹೆಚ್ಚು ಅವಲಂಬನೆಯಾಗುತ್ತಿದ್ದಾರೆ ಹಾಗೂ ಹೊಸ ವಿಧಾನಗಳಿಂದ ಕೃಷಿ ಮಾಡುತ್ತಿದ್ದಾರೆ. ಈಚೆಗೆ ಆರಂಭವಾದ  ಎಫ್‌ಪಿಒಗಳು , ಯುವಕರು ಡಿಜಿಟಲ್ ಜ್ಞಾನವನ್ನು ಹೊಂದಿರುವುದರಿಂದ, ಕೃಷಿ ಧಾರಣೆ, ಮಾರುಕಟ್ಟೆ, ಸಂಸ್ಕರಣೆ, ಮೌಲ್ಯವರ್ಧನೆ  ಕಡೆಗೂ ಗಮನ ಹರಿಸುತ್ತಿದ್ದಾರೆ. ಹೀಗಾಗಿ ರೈತ-ಮಾರುಕಟ್ಟೆ-ಗ್ರಾಹಕರ ನಡುವಿನ ಕೊಂಡಿಯೂ ಗಟ್ಟಿಯಾಗುತ್ತಿದೆ. ಯುವ ಕೃಷಿಕರ ಕಾರಣದಿಂದ ಮಾಹಿತಿ ಮತ್ತು ಪಾರದರ್ಶಕತೆ ಹೆಚ್ಚಾಗುತ್ತಿದೆ. ಇದೆಲ್ಲಾ ಕೃಷಿ ಕ್ಷೇತ್ರದ ಬೆಳವಣಿಗೆಗೆ ಕಾರಣವಾಗುತ್ತಿದೆ ಎನ್ನುವುದು  ಅಧ್ಯಯನ ವರದಿ. ಈ ನಡುವೆ ರೈತರೇ ನಿರ್ಮಿಸುವ ಎಫ್‌ಪಿಒ ಗಳು ಕೂಡಾ ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರುಕಟ್ಟೆಗೂ ರೈತರಿಗೆ ನೆರವಾಗುತ್ತಿವೆ. ಈ ಎಲ್ಲಾ ಕಾರಣದಿಂದ ಗ್ರಾಮೀಣ ಆರ್ಥಿಕತೆ ಏರಿಕೆಯತ್ತ ಸಾಗುತ್ತಿದೆ. ಸರ್ಕಾರದ ಹೆಜ್ಜೆಗಳು ಗಮನಾರ್ಹವಾಗುತ್ತಿದೆ.

Advertisement

ಕಳೆದ ಕೆಲವು ವರ್ಷಗಳಿಂದ ಗ್ರಾಮೀಣ ಪರಿಸರದಲ್ಲಿ ಕೃಷಿ ಸಾಲದ ಏರಿಕೆ ಕಂಡುಬಂದಿದೆ. ಕಳೆದ ಐದು ವರ್ಷಗಳಲ್ಲಿ ಕೃಷಿ ಸಾಲವು  8 ಲಕ್ಷ ಕೋಟಿಯಿಂದ  14 ಲಕ್ಷ ಕೋಟಿಗೆ  ಅಂದರೆ ಸುಮಾರು 10% ಹೆಚ್ಚಾಗಿದೆ. ಗ್ರಾಮೀಣ ಕಿರುಬಂಡವಾಳಗಳೂ ಬೆಳೆದಿವೆ. ಹೀಗಾಗಿ ಗ್ರಾಮೀಣ ಆರ್ಥಿಕತೆ ಈಗ ಬೆಳೆಯುತ್ತಿದೆ. ಸಕಾಲದಲ್ಲಿ ಎಲ್ಲಾ ಸಂಸ್ಥೆಗಳೂ, ರೈತರೂ ಎಚ್ಚೆತ್ತುಕೊಂಡು ದೇಶದ ಆರ್ಥಿಕತೆಯ ಗಟ್ಟಿಗಾಗಿ ಪ್ರಯತ್ನ ಮಾಡಬಹುದಾಗಿದೆ ಎಂದು ಆರ್ಥಿಕ ಸಮೀಕ್ಷಾ ವರದಿ ಹೇಳಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

15 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

15 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago