MIRROR FOCUS

ವಯನಾಡ್‌ನಲ್ಲಿ ಭಾರತೀಯ ಸೇನೆಯಿಂದ “ನೆರವಿನ ಸೇತುವೆ” | ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಬೈಲಿಬ್ರಿಡ್ಜ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಯನಾಡ್ ಚೂರಲ್​​ಮಲದಲ್ಲಿ ರಕ್ಷಣಾ ಕಾರ್ಯಾಚರಣೆಯ ನಿಮಿತ್ತ ಭಾರತೀಯ ಸೇನೆಯು  ಬೈಲಿ ಸೇತುವೆಯ ನಿರ್ಮಾಣ ಮಾಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರತಿಕೂಲ ವಾತಾವರಣದ ನಡುವೆಯೂ ಭಾರತೀಯ ಸೇನೆಯ ಸಿಬಂದಿಗಳು ಈ ಕಾರ್ಯ ಮಾಡಿದ್ದಾರೆ.  ಇದೀಗ ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ಸುಗಮವಾಗಲಿದೆ. ಪರಿಹಾರ ಕಾರ್ಯಗಳಿಗೆ ವೇಗ ಸಿಗಲಿದೆ.……….ಮುಂದೆ ಓದಿ……..

Advertisement

ಭಾರತೀಯ ಸೇನೆಯು ದಾಖಲೆಯ ಸಮಯದಲ್ಲಿ ಬೈಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ.  ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ  ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ ಬೈಲಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ ದೆಹಲಿಯಿಂದ ವಸ್ತುಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ತರಿಸಿ ಅಲ್ಲಿಂದ ಲಾರಿಗಳ ಮೂಲಕ ಸಾಮಾಗ್ರಿಗಳನ್ನು ತಂದು ಕಳೆದ 24 ಗಂಟೆಯ ಅವಧಿಯಲ್ಲಿ ಸೇತುವೆ ಕಾರ್ಯ ನಡೆದಿದೆ.

ಇದು ಒಂದು ರೀತಿಯ ಪೋರ್ಟಬಲ್ ಸೇತುವೆಯಾಗಿದೆ. ತೀರಾ ಸಂಕಷ್ಟದ ಸನ್ನಿವೇಶದಲ್ಲಿ ಈ ಸೇತುವೆಯ ಮೂಲಕ ಕಾರ್ಯಾಚರಣೆಗಳು ನಡೆಯುತ್ತದೆ. ತುರ್ತು ಸಂದರ್ಭಗಳಲ್ಲಿ  ಬಳಸಲಾಗುತ್ತದೆ. ಚಿಕ್ಕ ತಂಡದಿಂದ ಬೈಲಿ ಸೇತುವೆಗಳನ್ನು ತ್ವರಿತವಾಗಿ  ಜೋಡಿಸಬಹುದು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಅಗತ್ಯವಾದ ವಾಹನಗಳು ಮತ್ತು ಉಪಕರಣಗಳನ್ನು ಒಳಗೊಂಡಂತೆ ಭಾರವಾದ ವಾಹನಗಳೂ ಓಡಾಟ ನಡೆಸಬಹುದು. ಜೆಸಿಬಿಯಂತಹ ಯಂತ್ರಗಳೂ ಕೂಡಾ ಈ ಸೇತುವೆಯಲ್ಲಿ ಓಡಾಡುತ್ತದೆ.

ಸೇತುವೆ ನಿರ್ಮಾಣ ಪೂರ್ಣಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ಯಾರಾ ರೆಜಿಮೆಂಟಲ್ ತರಬೇತಿ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಅರ್ಜುನ್ ಸೆಗನ್, 24 ಟನ್ ತೂಕದ ವರ್ಗದ ಬೈಲಿ ಸೇತುವೆಯ ಕೆಲಸವನ್ನು ನಾವು ಇಂದು ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ. ನಮ್ಮ ಇಂಜಿನಿಯರ್‌ಗಳು ರಾತ್ರಿಯಿಡೀ ಕೆಲಸದಲ್ಲಿದ್ದರು ಎಂದಿದ್ದಾರೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ…

25 minutes ago

ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…

4 hours ago

ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |

ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ.…

8 hours ago

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

17 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

17 hours ago