Advertisement
MIRROR FOCUS

ವಯನಾಡ್‌ನಲ್ಲಿ ಭಾರತೀಯ ಸೇನೆಯಿಂದ “ನೆರವಿನ ಸೇತುವೆ” | ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಬೈಲಿಬ್ರಿಡ್ಜ್ |

Share

ವಯನಾಡ್ ಚೂರಲ್​​ಮಲದಲ್ಲಿ ರಕ್ಷಣಾ ಕಾರ್ಯಾಚರಣೆಯ ನಿಮಿತ್ತ ಭಾರತೀಯ ಸೇನೆಯು  ಬೈಲಿ ಸೇತುವೆಯ ನಿರ್ಮಾಣ ಮಾಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರತಿಕೂಲ ವಾತಾವರಣದ ನಡುವೆಯೂ ಭಾರತೀಯ ಸೇನೆಯ ಸಿಬಂದಿಗಳು ಈ ಕಾರ್ಯ ಮಾಡಿದ್ದಾರೆ.  ಇದೀಗ ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ಸುಗಮವಾಗಲಿದೆ. ಪರಿಹಾರ ಕಾರ್ಯಗಳಿಗೆ ವೇಗ ಸಿಗಲಿದೆ.……….ಮುಂದೆ ಓದಿ……..

ಭಾರತೀಯ ಸೇನೆಯು ದಾಖಲೆಯ ಸಮಯದಲ್ಲಿ ಬೈಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ.  ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ  ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ ಬೈಲಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ ದೆಹಲಿಯಿಂದ ವಸ್ತುಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ತರಿಸಿ ಅಲ್ಲಿಂದ ಲಾರಿಗಳ ಮೂಲಕ ಸಾಮಾಗ್ರಿಗಳನ್ನು ತಂದು ಕಳೆದ 24 ಗಂಟೆಯ ಅವಧಿಯಲ್ಲಿ ಸೇತುವೆ ಕಾರ್ಯ ನಡೆದಿದೆ.

ಇದು ಒಂದು ರೀತಿಯ ಪೋರ್ಟಬಲ್ ಸೇತುವೆಯಾಗಿದೆ. ತೀರಾ ಸಂಕಷ್ಟದ ಸನ್ನಿವೇಶದಲ್ಲಿ ಈ ಸೇತುವೆಯ ಮೂಲಕ ಕಾರ್ಯಾಚರಣೆಗಳು ನಡೆಯುತ್ತದೆ. ತುರ್ತು ಸಂದರ್ಭಗಳಲ್ಲಿ  ಬಳಸಲಾಗುತ್ತದೆ. ಚಿಕ್ಕ ತಂಡದಿಂದ ಬೈಲಿ ಸೇತುವೆಗಳನ್ನು ತ್ವರಿತವಾಗಿ  ಜೋಡಿಸಬಹುದು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಅಗತ್ಯವಾದ ವಾಹನಗಳು ಮತ್ತು ಉಪಕರಣಗಳನ್ನು ಒಳಗೊಂಡಂತೆ ಭಾರವಾದ ವಾಹನಗಳೂ ಓಡಾಟ ನಡೆಸಬಹುದು. ಜೆಸಿಬಿಯಂತಹ ಯಂತ್ರಗಳೂ ಕೂಡಾ ಈ ಸೇತುವೆಯಲ್ಲಿ ಓಡಾಡುತ್ತದೆ.

ಸೇತುವೆ ನಿರ್ಮಾಣ ಪೂರ್ಣಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ಯಾರಾ ರೆಜಿಮೆಂಟಲ್ ತರಬೇತಿ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಅರ್ಜುನ್ ಸೆಗನ್, 24 ಟನ್ ತೂಕದ ವರ್ಗದ ಬೈಲಿ ಸೇತುವೆಯ ಕೆಲಸವನ್ನು ನಾವು ಇಂದು ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ. ನಮ್ಮ ಇಂಜಿನಿಯರ್‌ಗಳು ರಾತ್ರಿಯಿಡೀ ಕೆಲಸದಲ್ಲಿದ್ದರು ಎಂದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

20 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago