Advertisement
MIRROR FOCUS

ವಯನಾಡ್‌ನಲ್ಲಿ ಭಾರತೀಯ ಸೇನೆಯಿಂದ “ನೆರವಿನ ಸೇತುವೆ” | ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಬೈಲಿಬ್ರಿಡ್ಜ್ |

Share

ವಯನಾಡ್ ಚೂರಲ್​​ಮಲದಲ್ಲಿ ರಕ್ಷಣಾ ಕಾರ್ಯಾಚರಣೆಯ ನಿಮಿತ್ತ ಭಾರತೀಯ ಸೇನೆಯು  ಬೈಲಿ ಸೇತುವೆಯ ನಿರ್ಮಾಣ ಮಾಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರತಿಕೂಲ ವಾತಾವರಣದ ನಡುವೆಯೂ ಭಾರತೀಯ ಸೇನೆಯ ಸಿಬಂದಿಗಳು ಈ ಕಾರ್ಯ ಮಾಡಿದ್ದಾರೆ.  ಇದೀಗ ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ಸುಗಮವಾಗಲಿದೆ. ಪರಿಹಾರ ಕಾರ್ಯಗಳಿಗೆ ವೇಗ ಸಿಗಲಿದೆ.……….ಮುಂದೆ ಓದಿ……..

ಭಾರತೀಯ ಸೇನೆಯು ದಾಖಲೆಯ ಸಮಯದಲ್ಲಿ ಬೈಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ.  ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ  ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ ಬೈಲಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ ದೆಹಲಿಯಿಂದ ವಸ್ತುಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ತರಿಸಿ ಅಲ್ಲಿಂದ ಲಾರಿಗಳ ಮೂಲಕ ಸಾಮಾಗ್ರಿಗಳನ್ನು ತಂದು ಕಳೆದ 24 ಗಂಟೆಯ ಅವಧಿಯಲ್ಲಿ ಸೇತುವೆ ಕಾರ್ಯ ನಡೆದಿದೆ.

ಇದು ಒಂದು ರೀತಿಯ ಪೋರ್ಟಬಲ್ ಸೇತುವೆಯಾಗಿದೆ. ತೀರಾ ಸಂಕಷ್ಟದ ಸನ್ನಿವೇಶದಲ್ಲಿ ಈ ಸೇತುವೆಯ ಮೂಲಕ ಕಾರ್ಯಾಚರಣೆಗಳು ನಡೆಯುತ್ತದೆ. ತುರ್ತು ಸಂದರ್ಭಗಳಲ್ಲಿ  ಬಳಸಲಾಗುತ್ತದೆ. ಚಿಕ್ಕ ತಂಡದಿಂದ ಬೈಲಿ ಸೇತುವೆಗಳನ್ನು ತ್ವರಿತವಾಗಿ  ಜೋಡಿಸಬಹುದು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಅಗತ್ಯವಾದ ವಾಹನಗಳು ಮತ್ತು ಉಪಕರಣಗಳನ್ನು ಒಳಗೊಂಡಂತೆ ಭಾರವಾದ ವಾಹನಗಳೂ ಓಡಾಟ ನಡೆಸಬಹುದು. ಜೆಸಿಬಿಯಂತಹ ಯಂತ್ರಗಳೂ ಕೂಡಾ ಈ ಸೇತುವೆಯಲ್ಲಿ ಓಡಾಡುತ್ತದೆ.

ಸೇತುವೆ ನಿರ್ಮಾಣ ಪೂರ್ಣಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ಯಾರಾ ರೆಜಿಮೆಂಟಲ್ ತರಬೇತಿ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಅರ್ಜುನ್ ಸೆಗನ್, 24 ಟನ್ ತೂಕದ ವರ್ಗದ ಬೈಲಿ ಸೇತುವೆಯ ಕೆಲಸವನ್ನು ನಾವು ಇಂದು ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ. ನಮ್ಮ ಇಂಜಿನಿಯರ್‌ಗಳು ರಾತ್ರಿಯಿಡೀ ಕೆಲಸದಲ್ಲಿದ್ದರು ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago