ವಯನಾಡ್ ಚೂರಲ್ಮಲದಲ್ಲಿ ರಕ್ಷಣಾ ಕಾರ್ಯಾಚರಣೆಯ ನಿಮಿತ್ತ ಭಾರತೀಯ ಸೇನೆಯು ಬೈಲಿ ಸೇತುವೆಯ ನಿರ್ಮಾಣ ಮಾಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರತಿಕೂಲ ವಾತಾವರಣದ ನಡುವೆಯೂ ಭಾರತೀಯ ಸೇನೆಯ ಸಿಬಂದಿಗಳು ಈ ಕಾರ್ಯ ಮಾಡಿದ್ದಾರೆ. ಇದೀಗ ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ಸುಗಮವಾಗಲಿದೆ. ಪರಿಹಾರ ಕಾರ್ಯಗಳಿಗೆ ವೇಗ ಸಿಗಲಿದೆ.……….ಮುಂದೆ ಓದಿ……..
ಭಾರತೀಯ ಸೇನೆಯು ದಾಖಲೆಯ ಸಮಯದಲ್ಲಿ ಬೈಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ ಬೈಲಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ ದೆಹಲಿಯಿಂದ ವಸ್ತುಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ತರಿಸಿ ಅಲ್ಲಿಂದ ಲಾರಿಗಳ ಮೂಲಕ ಸಾಮಾಗ್ರಿಗಳನ್ನು ತಂದು ಕಳೆದ 24 ಗಂಟೆಯ ಅವಧಿಯಲ್ಲಿ ಸೇತುವೆ ಕಾರ್ಯ ನಡೆದಿದೆ.
ಇದು ಒಂದು ರೀತಿಯ ಪೋರ್ಟಬಲ್ ಸೇತುವೆಯಾಗಿದೆ. ತೀರಾ ಸಂಕಷ್ಟದ ಸನ್ನಿವೇಶದಲ್ಲಿ ಈ ಸೇತುವೆಯ ಮೂಲಕ ಕಾರ್ಯಾಚರಣೆಗಳು ನಡೆಯುತ್ತದೆ. ತುರ್ತು ಸಂದರ್ಭಗಳಲ್ಲಿ ಬಳಸಲಾಗುತ್ತದೆ. ಚಿಕ್ಕ ತಂಡದಿಂದ ಬೈಲಿ ಸೇತುವೆಗಳನ್ನು ತ್ವರಿತವಾಗಿ ಜೋಡಿಸಬಹುದು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಅಗತ್ಯವಾದ ವಾಹನಗಳು ಮತ್ತು ಉಪಕರಣಗಳನ್ನು ಒಳಗೊಂಡಂತೆ ಭಾರವಾದ ವಾಹನಗಳೂ ಓಡಾಟ ನಡೆಸಬಹುದು. ಜೆಸಿಬಿಯಂತಹ ಯಂತ್ರಗಳೂ ಕೂಡಾ ಈ ಸೇತುವೆಯಲ್ಲಿ ಓಡಾಡುತ್ತದೆ.
ಸೇತುವೆ ನಿರ್ಮಾಣ ಪೂರ್ಣಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ಯಾರಾ ರೆಜಿಮೆಂಟಲ್ ತರಬೇತಿ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಅರ್ಜುನ್ ಸೆಗನ್, 24 ಟನ್ ತೂಕದ ವರ್ಗದ ಬೈಲಿ ಸೇತುವೆಯ ಕೆಲಸವನ್ನು ನಾವು ಇಂದು ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ. ನಮ್ಮ ಇಂಜಿನಿಯರ್ಗಳು ರಾತ್ರಿಯಿಡೀ ಕೆಲಸದಲ್ಲಿದ್ದರು ಎಂದಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…