Advertisement
MIRROR FOCUS

ವಯನಾಡ್‌ನಲ್ಲಿ ಭಾರತೀಯ ಸೇನೆಯಿಂದ “ನೆರವಿನ ಸೇತುವೆ” | ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಬೈಲಿಬ್ರಿಡ್ಜ್ |

Share

ವಯನಾಡ್ ಚೂರಲ್​​ಮಲದಲ್ಲಿ ರಕ್ಷಣಾ ಕಾರ್ಯಾಚರಣೆಯ ನಿಮಿತ್ತ ಭಾರತೀಯ ಸೇನೆಯು  ಬೈಲಿ ಸೇತುವೆಯ ನಿರ್ಮಾಣ ಮಾಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರತಿಕೂಲ ವಾತಾವರಣದ ನಡುವೆಯೂ ಭಾರತೀಯ ಸೇನೆಯ ಸಿಬಂದಿಗಳು ಈ ಕಾರ್ಯ ಮಾಡಿದ್ದಾರೆ.  ಇದೀಗ ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ಸುಗಮವಾಗಲಿದೆ. ಪರಿಹಾರ ಕಾರ್ಯಗಳಿಗೆ ವೇಗ ಸಿಗಲಿದೆ.……….ಮುಂದೆ ಓದಿ……..

ಭಾರತೀಯ ಸೇನೆಯು ದಾಖಲೆಯ ಸಮಯದಲ್ಲಿ ಬೈಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ.  ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ  ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ ಬೈಲಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ ದೆಹಲಿಯಿಂದ ವಸ್ತುಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ತರಿಸಿ ಅಲ್ಲಿಂದ ಲಾರಿಗಳ ಮೂಲಕ ಸಾಮಾಗ್ರಿಗಳನ್ನು ತಂದು ಕಳೆದ 24 ಗಂಟೆಯ ಅವಧಿಯಲ್ಲಿ ಸೇತುವೆ ಕಾರ್ಯ ನಡೆದಿದೆ.

ಇದು ಒಂದು ರೀತಿಯ ಪೋರ್ಟಬಲ್ ಸೇತುವೆಯಾಗಿದೆ. ತೀರಾ ಸಂಕಷ್ಟದ ಸನ್ನಿವೇಶದಲ್ಲಿ ಈ ಸೇತುವೆಯ ಮೂಲಕ ಕಾರ್ಯಾಚರಣೆಗಳು ನಡೆಯುತ್ತದೆ. ತುರ್ತು ಸಂದರ್ಭಗಳಲ್ಲಿ  ಬಳಸಲಾಗುತ್ತದೆ. ಚಿಕ್ಕ ತಂಡದಿಂದ ಬೈಲಿ ಸೇತುವೆಗಳನ್ನು ತ್ವರಿತವಾಗಿ  ಜೋಡಿಸಬಹುದು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಅಗತ್ಯವಾದ ವಾಹನಗಳು ಮತ್ತು ಉಪಕರಣಗಳನ್ನು ಒಳಗೊಂಡಂತೆ ಭಾರವಾದ ವಾಹನಗಳೂ ಓಡಾಟ ನಡೆಸಬಹುದು. ಜೆಸಿಬಿಯಂತಹ ಯಂತ್ರಗಳೂ ಕೂಡಾ ಈ ಸೇತುವೆಯಲ್ಲಿ ಓಡಾಡುತ್ತದೆ.

ಸೇತುವೆ ನಿರ್ಮಾಣ ಪೂರ್ಣಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ಯಾರಾ ರೆಜಿಮೆಂಟಲ್ ತರಬೇತಿ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಅರ್ಜುನ್ ಸೆಗನ್, 24 ಟನ್ ತೂಕದ ವರ್ಗದ ಬೈಲಿ ಸೇತುವೆಯ ಕೆಲಸವನ್ನು ನಾವು ಇಂದು ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ. ನಮ್ಮ ಇಂಜಿನಿಯರ್‌ಗಳು ರಾತ್ರಿಯಿಡೀ ಕೆಲಸದಲ್ಲಿದ್ದರು ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

4 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

9 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

18 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago