Advertisement
MIRROR FOCUS

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

Share

ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ  2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.

Advertisement
ಮಹಿಳೆಯರ 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ಭಾರತದ ಅಥ್ಲಿಟ್‌ ಪಾರುಲ್‌ ಚೌಧರಿ ಬೆಳ್ಳಿ ಪದಕ ಗೆದ್ದರೆ, ಪ್ರೀತಿ ಲಾಂಬಾ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಆದ್ರೆ ಟೇಬಲ್‌ ಟೆನ್ನಿಸ್‌ ಮಹಿಳೆಯರ ಡಬಲ್ಸ್‌ ಸೆಮಿ ಫೈನಲ್‌ನಲ್ಲಿ ಸುತೀರ್ಥ ಮುಖರ್ಜಿ-ಆಯ್ಹಿಕಾ ಮುಖರ್ಜಿ ಜೋಡಿ ಸೋತು ನಿರಾಸೆ ಮೂಡಿಸಿದೆ. ಇನ್ನೂ ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

3 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

17 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

18 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

18 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

18 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

18 hours ago