Advertisement
MIRROR FOCUS

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

Share

ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ  2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.

ಮಹಿಳೆಯರ 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ಭಾರತದ ಅಥ್ಲಿಟ್‌ ಪಾರುಲ್‌ ಚೌಧರಿ ಬೆಳ್ಳಿ ಪದಕ ಗೆದ್ದರೆ, ಪ್ರೀತಿ ಲಾಂಬಾ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಆದ್ರೆ ಟೇಬಲ್‌ ಟೆನ್ನಿಸ್‌ ಮಹಿಳೆಯರ ಡಬಲ್ಸ್‌ ಸೆಮಿ ಫೈನಲ್‌ನಲ್ಲಿ ಸುತೀರ್ಥ ಮುಖರ್ಜಿ-ಆಯ್ಹಿಕಾ ಮುಖರ್ಜಿ ಜೋಡಿ ಸೋತು ನಿರಾಸೆ ಮೂಡಿಸಿದೆ. ಇನ್ನೂ ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

14 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

14 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago