Advertisement
MIRROR FOCUS

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

Share

ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ  2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.

ಮಹಿಳೆಯರ 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ಭಾರತದ ಅಥ್ಲಿಟ್‌ ಪಾರುಲ್‌ ಚೌಧರಿ ಬೆಳ್ಳಿ ಪದಕ ಗೆದ್ದರೆ, ಪ್ರೀತಿ ಲಾಂಬಾ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಆದ್ರೆ ಟೇಬಲ್‌ ಟೆನ್ನಿಸ್‌ ಮಹಿಳೆಯರ ಡಬಲ್ಸ್‌ ಸೆಮಿ ಫೈನಲ್‌ನಲ್ಲಿ ಸುತೀರ್ಥ ಮುಖರ್ಜಿ-ಆಯ್ಹಿಕಾ ಮುಖರ್ಜಿ ಜೋಡಿ ಸೋತು ನಿರಾಸೆ ಮೂಡಿಸಿದೆ. ಇನ್ನೂ ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

Advertisement

ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

19 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

21 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago