Advertisement
MIRROR FOCUS

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

Share

ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ  2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.

ಮಹಿಳೆಯರ 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ಭಾರತದ ಅಥ್ಲಿಟ್‌ ಪಾರುಲ್‌ ಚೌಧರಿ ಬೆಳ್ಳಿ ಪದಕ ಗೆದ್ದರೆ, ಪ್ರೀತಿ ಲಾಂಬಾ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಆದ್ರೆ ಟೇಬಲ್‌ ಟೆನ್ನಿಸ್‌ ಮಹಿಳೆಯರ ಡಬಲ್ಸ್‌ ಸೆಮಿ ಫೈನಲ್‌ನಲ್ಲಿ ಸುತೀರ್ಥ ಮುಖರ್ಜಿ-ಆಯ್ಹಿಕಾ ಮುಖರ್ಜಿ ಜೋಡಿ ಸೋತು ನಿರಾಸೆ ಮೂಡಿಸಿದೆ. ಇನ್ನೂ ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

19 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

20 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

20 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

20 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

20 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago