Advertisement
MIRROR FOCUS

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

Share

ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ  2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.

ಮಹಿಳೆಯರ 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ಭಾರತದ ಅಥ್ಲಿಟ್‌ ಪಾರುಲ್‌ ಚೌಧರಿ ಬೆಳ್ಳಿ ಪದಕ ಗೆದ್ದರೆ, ಪ್ರೀತಿ ಲಾಂಬಾ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಆದ್ರೆ ಟೇಬಲ್‌ ಟೆನ್ನಿಸ್‌ ಮಹಿಳೆಯರ ಡಬಲ್ಸ್‌ ಸೆಮಿ ಫೈನಲ್‌ನಲ್ಲಿ ಸುತೀರ್ಥ ಮುಖರ್ಜಿ-ಆಯ್ಹಿಕಾ ಮುಖರ್ಜಿ ಜೋಡಿ ಸೋತು ನಿರಾಸೆ ಮೂಡಿಸಿದೆ. ಇನ್ನೂ ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

5 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

10 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

21 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago