Advertisement
The Rural Mirror ಫಾಲೋಅಪ್

#AsianGames2023 | ಭಾರತದ ಕ್ರೀಡಾಪಟುಗಳ ಮುಂದುವರೆದ ಪದಕ ಬೇಟೆ |ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

Share

ಕ್ರೀಡೆ ಅಂದರೆ ಉತ್ಸಾಹ. ಅದರ ಕೊರತೆ ಈ ಹಿಂದೆ ಭಾರತದಲ್ಲಿ ಎದ್ದು ಕಾಣುತ್ತಿತ್ತು. ಆದರೆ ಈಗ ಹಾಗಲ್ಲ. ಕ್ರೀಡಾಳುಗಳಿಗೆ ಕೇಂದ್ರ ಸರ್ಕಾರ ಉತ್ಸಾಹ ತುಂಬುತ್ತಿದೆ. ಹಾಗೆ ಅವರಿಗೆ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅದರ ಫಲವೇಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ #AsianGames ಭಾರತ ದಾಖಲೆ ಬರೆದಿದೆ. ಒಟ್ಟು 71 ಪದಕಗಳನ್ನು ಗೆಲ್ಲುವ ಮೂಲಕ 2018ರ ದಾಖಲೆಯನ್ನು ಬ್ರೇಕ್‌ ಮಾಡಿದೆ.

Advertisement
Advertisement

ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು ಇಲ್ಲಿಯವರೆಗೆ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಭಾರತ ಇಂದು ಈ ಗಡಿಯನ್ನು ದಾಟಿದ್ದು ಇನ್ನೂ 4 ದಿನ ಕ್ರೀಡಾಕೂಟ ನಡೆಯಲಿರುವ ಕಾರಣ ಹಲವು ಪದಕಗಳು ಬರುವ ನಿರೀಕ್ಷೆಯಿದೆ.

ಸದ್ಯ ಭಾರತ 16 ಚಿನ್ನ, 26 ಬೆಳ್ಳಿ, 29 ಕಂಚಿನ ಪದಕ ಸೇರಿ ಒಟ್ಟು 71 ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದೆ. 2018ರ ಕ್ರೀಡಾಕೂಟದ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನ ಪಡೆದಿತ್ತು.

ಇಲ್ಲಿಯವರೆಗೆ  ಚೀನಾ 164 ಚಿನ್ನ, 90 ಬೆಳ್ಳಿ, 46 ಕಂಚು ಸೇರಿ 300 ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ 33 ಚಿನ್ನ, 48 ಬೆಳ್ಳಿ, 50 ಕಂಚು ಸೇರಿ 131 ಪದಕ ಗೆದ್ದಿರುವ ಜಪಾನ್‌ ಎರಡನೇ ಸ್ಥಾನದಲ್ಲಿದೆ. 32 ಚಿನ್ನ, 43 ಬೆಳ್ಳಿ, 65 ಕಂಚಿನ ಪದಕ ಸೇರಿ ಒಟ್ಟು 140 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಇಂದು ನಡೆದ ಮಿಶ್ರ ಅರ್ಚರಿ ಸ್ಪರ್ಧೆಯಲ್ಲಿ ಜ್ಯೋತಿ ವೆನ್ನಮ್ ಮತ್ತು ಓಜಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಮಂಜು ರಾಣಿ ಮತ್ತು ರಾಮ್ ಬಾಬೂ ಅವರಿದ್ದ ಮಿಶ್ರ ತಂಡ 35 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

12 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

13 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

13 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

13 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

14 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

14 hours ago