Advertisement
The Rural Mirror ಫಾಲೋಅಪ್

#AsianGames2023 | ಭಾರತದ ಕ್ರೀಡಾಪಟುಗಳ ಮುಂದುವರೆದ ಪದಕ ಬೇಟೆ |ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

Share

ಕ್ರೀಡೆ ಅಂದರೆ ಉತ್ಸಾಹ. ಅದರ ಕೊರತೆ ಈ ಹಿಂದೆ ಭಾರತದಲ್ಲಿ ಎದ್ದು ಕಾಣುತ್ತಿತ್ತು. ಆದರೆ ಈಗ ಹಾಗಲ್ಲ. ಕ್ರೀಡಾಳುಗಳಿಗೆ ಕೇಂದ್ರ ಸರ್ಕಾರ ಉತ್ಸಾಹ ತುಂಬುತ್ತಿದೆ. ಹಾಗೆ ಅವರಿಗೆ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅದರ ಫಲವೇಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ #AsianGames ಭಾರತ ದಾಖಲೆ ಬರೆದಿದೆ. ಒಟ್ಟು 71 ಪದಕಗಳನ್ನು ಗೆಲ್ಲುವ ಮೂಲಕ 2018ರ ದಾಖಲೆಯನ್ನು ಬ್ರೇಕ್‌ ಮಾಡಿದೆ.

ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು ಇಲ್ಲಿಯವರೆಗೆ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಭಾರತ ಇಂದು ಈ ಗಡಿಯನ್ನು ದಾಟಿದ್ದು ಇನ್ನೂ 4 ದಿನ ಕ್ರೀಡಾಕೂಟ ನಡೆಯಲಿರುವ ಕಾರಣ ಹಲವು ಪದಕಗಳು ಬರುವ ನಿರೀಕ್ಷೆಯಿದೆ.

ಸದ್ಯ ಭಾರತ 16 ಚಿನ್ನ, 26 ಬೆಳ್ಳಿ, 29 ಕಂಚಿನ ಪದಕ ಸೇರಿ ಒಟ್ಟು 71 ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದೆ. 2018ರ ಕ್ರೀಡಾಕೂಟದ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನ ಪಡೆದಿತ್ತು.

ಇಲ್ಲಿಯವರೆಗೆ  ಚೀನಾ 164 ಚಿನ್ನ, 90 ಬೆಳ್ಳಿ, 46 ಕಂಚು ಸೇರಿ 300 ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ 33 ಚಿನ್ನ, 48 ಬೆಳ್ಳಿ, 50 ಕಂಚು ಸೇರಿ 131 ಪದಕ ಗೆದ್ದಿರುವ ಜಪಾನ್‌ ಎರಡನೇ ಸ್ಥಾನದಲ್ಲಿದೆ. 32 ಚಿನ್ನ, 43 ಬೆಳ್ಳಿ, 65 ಕಂಚಿನ ಪದಕ ಸೇರಿ ಒಟ್ಟು 140 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಇಂದು ನಡೆದ ಮಿಶ್ರ ಅರ್ಚರಿ ಸ್ಪರ್ಧೆಯಲ್ಲಿ ಜ್ಯೋತಿ ವೆನ್ನಮ್ ಮತ್ತು ಓಜಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಮಂಜು ರಾಣಿ ಮತ್ತು ರಾಮ್ ಬಾಬೂ ಅವರಿದ್ದ ಮಿಶ್ರ ತಂಡ 35 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

3 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

13 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

14 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

18 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago