The Rural Mirror ಫಾಲೋಅಪ್

#AsianGames2023 | ಭಾರತದ ಕ್ರೀಡಾಪಟುಗಳ ಮುಂದುವರೆದ ಪದಕ ಬೇಟೆ |ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕ್ರೀಡೆ ಅಂದರೆ ಉತ್ಸಾಹ. ಅದರ ಕೊರತೆ ಈ ಹಿಂದೆ ಭಾರತದಲ್ಲಿ ಎದ್ದು ಕಾಣುತ್ತಿತ್ತು. ಆದರೆ ಈಗ ಹಾಗಲ್ಲ. ಕ್ರೀಡಾಳುಗಳಿಗೆ ಕೇಂದ್ರ ಸರ್ಕಾರ ಉತ್ಸಾಹ ತುಂಬುತ್ತಿದೆ. ಹಾಗೆ ಅವರಿಗೆ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅದರ ಫಲವೇಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ #AsianGames ಭಾರತ ದಾಖಲೆ ಬರೆದಿದೆ. ಒಟ್ಟು 71 ಪದಕಗಳನ್ನು ಗೆಲ್ಲುವ ಮೂಲಕ 2018ರ ದಾಖಲೆಯನ್ನು ಬ್ರೇಕ್‌ ಮಾಡಿದೆ.

Advertisement
Advertisement

ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು ಇಲ್ಲಿಯವರೆಗೆ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಭಾರತ ಇಂದು ಈ ಗಡಿಯನ್ನು ದಾಟಿದ್ದು ಇನ್ನೂ 4 ದಿನ ಕ್ರೀಡಾಕೂಟ ನಡೆಯಲಿರುವ ಕಾರಣ ಹಲವು ಪದಕಗಳು ಬರುವ ನಿರೀಕ್ಷೆಯಿದೆ.

ಸದ್ಯ ಭಾರತ 16 ಚಿನ್ನ, 26 ಬೆಳ್ಳಿ, 29 ಕಂಚಿನ ಪದಕ ಸೇರಿ ಒಟ್ಟು 71 ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದೆ. 2018ರ ಕ್ರೀಡಾಕೂಟದ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನ ಪಡೆದಿತ್ತು.

ಇಲ್ಲಿಯವರೆಗೆ  ಚೀನಾ 164 ಚಿನ್ನ, 90 ಬೆಳ್ಳಿ, 46 ಕಂಚು ಸೇರಿ 300 ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ 33 ಚಿನ್ನ, 48 ಬೆಳ್ಳಿ, 50 ಕಂಚು ಸೇರಿ 131 ಪದಕ ಗೆದ್ದಿರುವ ಜಪಾನ್‌ ಎರಡನೇ ಸ್ಥಾನದಲ್ಲಿದೆ. 32 ಚಿನ್ನ, 43 ಬೆಳ್ಳಿ, 65 ಕಂಚಿನ ಪದಕ ಸೇರಿ ಒಟ್ಟು 140 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಇಂದು ನಡೆದ ಮಿಶ್ರ ಅರ್ಚರಿ ಸ್ಪರ್ಧೆಯಲ್ಲಿ ಜ್ಯೋತಿ ವೆನ್ನಮ್ ಮತ್ತು ಓಜಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಮಂಜು ರಾಣಿ ಮತ್ತು ರಾಮ್ ಬಾಬೂ ಅವರಿದ್ದ ಮಿಶ್ರ ತಂಡ 35 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

9 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

14 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

22 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

22 hours ago