Advertisement
The Rural Mirror ಫಾಲೋಅಪ್

#AsianGames2023 | ಭಾರತದ ಕ್ರೀಡಾಪಟುಗಳ ಮುಂದುವರೆದ ಪದಕ ಬೇಟೆ |ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

Share

ಕ್ರೀಡೆ ಅಂದರೆ ಉತ್ಸಾಹ. ಅದರ ಕೊರತೆ ಈ ಹಿಂದೆ ಭಾರತದಲ್ಲಿ ಎದ್ದು ಕಾಣುತ್ತಿತ್ತು. ಆದರೆ ಈಗ ಹಾಗಲ್ಲ. ಕ್ರೀಡಾಳುಗಳಿಗೆ ಕೇಂದ್ರ ಸರ್ಕಾರ ಉತ್ಸಾಹ ತುಂಬುತ್ತಿದೆ. ಹಾಗೆ ಅವರಿಗೆ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅದರ ಫಲವೇಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ #AsianGames ಭಾರತ ದಾಖಲೆ ಬರೆದಿದೆ. ಒಟ್ಟು 71 ಪದಕಗಳನ್ನು ಗೆಲ್ಲುವ ಮೂಲಕ 2018ರ ದಾಖಲೆಯನ್ನು ಬ್ರೇಕ್‌ ಮಾಡಿದೆ.

Advertisement

ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು ಇಲ್ಲಿಯವರೆಗೆ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಭಾರತ ಇಂದು ಈ ಗಡಿಯನ್ನು ದಾಟಿದ್ದು ಇನ್ನೂ 4 ದಿನ ಕ್ರೀಡಾಕೂಟ ನಡೆಯಲಿರುವ ಕಾರಣ ಹಲವು ಪದಕಗಳು ಬರುವ ನಿರೀಕ್ಷೆಯಿದೆ.

ಸದ್ಯ ಭಾರತ 16 ಚಿನ್ನ, 26 ಬೆಳ್ಳಿ, 29 ಕಂಚಿನ ಪದಕ ಸೇರಿ ಒಟ್ಟು 71 ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದೆ. 2018ರ ಕ್ರೀಡಾಕೂಟದ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನ ಪಡೆದಿತ್ತು.

ಇಲ್ಲಿಯವರೆಗೆ  ಚೀನಾ 164 ಚಿನ್ನ, 90 ಬೆಳ್ಳಿ, 46 ಕಂಚು ಸೇರಿ 300 ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ 33 ಚಿನ್ನ, 48 ಬೆಳ್ಳಿ, 50 ಕಂಚು ಸೇರಿ 131 ಪದಕ ಗೆದ್ದಿರುವ ಜಪಾನ್‌ ಎರಡನೇ ಸ್ಥಾನದಲ್ಲಿದೆ. 32 ಚಿನ್ನ, 43 ಬೆಳ್ಳಿ, 65 ಕಂಚಿನ ಪದಕ ಸೇರಿ ಒಟ್ಟು 140 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಇಂದು ನಡೆದ ಮಿಶ್ರ ಅರ್ಚರಿ ಸ್ಪರ್ಧೆಯಲ್ಲಿ ಜ್ಯೋತಿ ವೆನ್ನಮ್ ಮತ್ತು ಓಜಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಮಂಜು ರಾಣಿ ಮತ್ತು ರಾಮ್ ಬಾಬೂ ಅವರಿದ್ದ ಮಿಶ್ರ ತಂಡ 35 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

5 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

13 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

13 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

13 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

13 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

22 hours ago