Advertisement
The Rural Mirror ಫಾಲೋಅಪ್

#AsianGames2023 | ಭಾರತದ ಕ್ರೀಡಾಪಟುಗಳ ಮುಂದುವರೆದ ಪದಕ ಬೇಟೆ |ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

Share

ಕ್ರೀಡೆ ಅಂದರೆ ಉತ್ಸಾಹ. ಅದರ ಕೊರತೆ ಈ ಹಿಂದೆ ಭಾರತದಲ್ಲಿ ಎದ್ದು ಕಾಣುತ್ತಿತ್ತು. ಆದರೆ ಈಗ ಹಾಗಲ್ಲ. ಕ್ರೀಡಾಳುಗಳಿಗೆ ಕೇಂದ್ರ ಸರ್ಕಾರ ಉತ್ಸಾಹ ತುಂಬುತ್ತಿದೆ. ಹಾಗೆ ಅವರಿಗೆ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅದರ ಫಲವೇಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ #AsianGames ಭಾರತ ದಾಖಲೆ ಬರೆದಿದೆ. ಒಟ್ಟು 71 ಪದಕಗಳನ್ನು ಗೆಲ್ಲುವ ಮೂಲಕ 2018ರ ದಾಖಲೆಯನ್ನು ಬ್ರೇಕ್‌ ಮಾಡಿದೆ.

ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು ಇಲ್ಲಿಯವರೆಗೆ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಭಾರತ ಇಂದು ಈ ಗಡಿಯನ್ನು ದಾಟಿದ್ದು ಇನ್ನೂ 4 ದಿನ ಕ್ರೀಡಾಕೂಟ ನಡೆಯಲಿರುವ ಕಾರಣ ಹಲವು ಪದಕಗಳು ಬರುವ ನಿರೀಕ್ಷೆಯಿದೆ.

ಸದ್ಯ ಭಾರತ 16 ಚಿನ್ನ, 26 ಬೆಳ್ಳಿ, 29 ಕಂಚಿನ ಪದಕ ಸೇರಿ ಒಟ್ಟು 71 ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದೆ. 2018ರ ಕ್ರೀಡಾಕೂಟದ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನ ಪಡೆದಿತ್ತು.

ಇಲ್ಲಿಯವರೆಗೆ  ಚೀನಾ 164 ಚಿನ್ನ, 90 ಬೆಳ್ಳಿ, 46 ಕಂಚು ಸೇರಿ 300 ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ 33 ಚಿನ್ನ, 48 ಬೆಳ್ಳಿ, 50 ಕಂಚು ಸೇರಿ 131 ಪದಕ ಗೆದ್ದಿರುವ ಜಪಾನ್‌ ಎರಡನೇ ಸ್ಥಾನದಲ್ಲಿದೆ. 32 ಚಿನ್ನ, 43 ಬೆಳ್ಳಿ, 65 ಕಂಚಿನ ಪದಕ ಸೇರಿ ಒಟ್ಟು 140 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಇಂದು ನಡೆದ ಮಿಶ್ರ ಅರ್ಚರಿ ಸ್ಪರ್ಧೆಯಲ್ಲಿ ಜ್ಯೋತಿ ವೆನ್ನಮ್ ಮತ್ತು ಓಜಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಮಂಜು ರಾಣಿ ಮತ್ತು ರಾಮ್ ಬಾಬೂ ಅವರಿದ್ದ ಮಿಶ್ರ ತಂಡ 35 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

10 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

14 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago