Advertisement
The Rural Mirror ಫಾಲೋಅಪ್

#AsianGames2023 | ಭಾರತದ ಕ್ರೀಡಾಪಟುಗಳ ಮುಂದುವರೆದ ಪದಕ ಬೇಟೆ |ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

Share

ಕ್ರೀಡೆ ಅಂದರೆ ಉತ್ಸಾಹ. ಅದರ ಕೊರತೆ ಈ ಹಿಂದೆ ಭಾರತದಲ್ಲಿ ಎದ್ದು ಕಾಣುತ್ತಿತ್ತು. ಆದರೆ ಈಗ ಹಾಗಲ್ಲ. ಕ್ರೀಡಾಳುಗಳಿಗೆ ಕೇಂದ್ರ ಸರ್ಕಾರ ಉತ್ಸಾಹ ತುಂಬುತ್ತಿದೆ. ಹಾಗೆ ಅವರಿಗೆ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅದರ ಫಲವೇಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ #AsianGames ಭಾರತ ದಾಖಲೆ ಬರೆದಿದೆ. ಒಟ್ಟು 71 ಪದಕಗಳನ್ನು ಗೆಲ್ಲುವ ಮೂಲಕ 2018ರ ದಾಖಲೆಯನ್ನು ಬ್ರೇಕ್‌ ಮಾಡಿದೆ.

ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು ಇಲ್ಲಿಯವರೆಗೆ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಭಾರತ ಇಂದು ಈ ಗಡಿಯನ್ನು ದಾಟಿದ್ದು ಇನ್ನೂ 4 ದಿನ ಕ್ರೀಡಾಕೂಟ ನಡೆಯಲಿರುವ ಕಾರಣ ಹಲವು ಪದಕಗಳು ಬರುವ ನಿರೀಕ್ಷೆಯಿದೆ.

ಸದ್ಯ ಭಾರತ 16 ಚಿನ್ನ, 26 ಬೆಳ್ಳಿ, 29 ಕಂಚಿನ ಪದಕ ಸೇರಿ ಒಟ್ಟು 71 ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದೆ. 2018ರ ಕ್ರೀಡಾಕೂಟದ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನ ಪಡೆದಿತ್ತು.

ಇಲ್ಲಿಯವರೆಗೆ  ಚೀನಾ 164 ಚಿನ್ನ, 90 ಬೆಳ್ಳಿ, 46 ಕಂಚು ಸೇರಿ 300 ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ 33 ಚಿನ್ನ, 48 ಬೆಳ್ಳಿ, 50 ಕಂಚು ಸೇರಿ 131 ಪದಕ ಗೆದ್ದಿರುವ ಜಪಾನ್‌ ಎರಡನೇ ಸ್ಥಾನದಲ್ಲಿದೆ. 32 ಚಿನ್ನ, 43 ಬೆಳ್ಳಿ, 65 ಕಂಚಿನ ಪದಕ ಸೇರಿ ಒಟ್ಟು 140 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಇಂದು ನಡೆದ ಮಿಶ್ರ ಅರ್ಚರಿ ಸ್ಪರ್ಧೆಯಲ್ಲಿ ಜ್ಯೋತಿ ವೆನ್ನಮ್ ಮತ್ತು ಓಜಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಮಂಜು ರಾಣಿ ಮತ್ತು ರಾಮ್ ಬಾಬೂ ಅವರಿದ್ದ ಮಿಶ್ರ ತಂಡ 35 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

14 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

16 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

17 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

18 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago