Advertisement
The Rural Mirror ಫಾಲೋಅಪ್

#AsianGames2023 | ಭಾರತದ ಕ್ರೀಡಾಪಟುಗಳ ಮುಂದುವರೆದ ಪದಕ ಬೇಟೆ |ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

Share

ಕ್ರೀಡೆ ಅಂದರೆ ಉತ್ಸಾಹ. ಅದರ ಕೊರತೆ ಈ ಹಿಂದೆ ಭಾರತದಲ್ಲಿ ಎದ್ದು ಕಾಣುತ್ತಿತ್ತು. ಆದರೆ ಈಗ ಹಾಗಲ್ಲ. ಕ್ರೀಡಾಳುಗಳಿಗೆ ಕೇಂದ್ರ ಸರ್ಕಾರ ಉತ್ಸಾಹ ತುಂಬುತ್ತಿದೆ. ಹಾಗೆ ಅವರಿಗೆ ಬೇಕಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅದರ ಫಲವೇಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ #AsianGames ಭಾರತ ದಾಖಲೆ ಬರೆದಿದೆ. ಒಟ್ಟು 71 ಪದಕಗಳನ್ನು ಗೆಲ್ಲುವ ಮೂಲಕ 2018ರ ದಾಖಲೆಯನ್ನು ಬ್ರೇಕ್‌ ಮಾಡಿದೆ.

ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು ಇಲ್ಲಿಯವರೆಗೆ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಭಾರತ ಇಂದು ಈ ಗಡಿಯನ್ನು ದಾಟಿದ್ದು ಇನ್ನೂ 4 ದಿನ ಕ್ರೀಡಾಕೂಟ ನಡೆಯಲಿರುವ ಕಾರಣ ಹಲವು ಪದಕಗಳು ಬರುವ ನಿರೀಕ್ಷೆಯಿದೆ.

ಸದ್ಯ ಭಾರತ 16 ಚಿನ್ನ, 26 ಬೆಳ್ಳಿ, 29 ಕಂಚಿನ ಪದಕ ಸೇರಿ ಒಟ್ಟು 71 ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಮುಂದುವರಿದಿದೆ. 2018ರ ಕ್ರೀಡಾಕೂಟದ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನ ಪಡೆದಿತ್ತು.

ಇಲ್ಲಿಯವರೆಗೆ  ಚೀನಾ 164 ಚಿನ್ನ, 90 ಬೆಳ್ಳಿ, 46 ಕಂಚು ಸೇರಿ 300 ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ 33 ಚಿನ್ನ, 48 ಬೆಳ್ಳಿ, 50 ಕಂಚು ಸೇರಿ 131 ಪದಕ ಗೆದ್ದಿರುವ ಜಪಾನ್‌ ಎರಡನೇ ಸ್ಥಾನದಲ್ಲಿದೆ. 32 ಚಿನ್ನ, 43 ಬೆಳ್ಳಿ, 65 ಕಂಚಿನ ಪದಕ ಸೇರಿ ಒಟ್ಟು 140 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಇಂದು ನಡೆದ ಮಿಶ್ರ ಅರ್ಚರಿ ಸ್ಪರ್ಧೆಯಲ್ಲಿ ಜ್ಯೋತಿ ವೆನ್ನಮ್ ಮತ್ತು ಓಜಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಮಂಜು ರಾಣಿ ಮತ್ತು ರಾಮ್ ಬಾಬೂ ಅವರಿದ್ದ ಮಿಶ್ರ ತಂಡ 35 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

4 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

13 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

13 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

17 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

18 hours ago