Advertisement
MIRROR FOCUS

ಪದಕ ಬೇಟೆ ಆರಂಭಿಸಿದ ಭಾರತೀಯ ಕ್ರೀಡಾಪಟುಗಳು | ವಿಶ್ವ ದಾಖಲೆಯೊಂದಿಗೆ ಶೂಟಿಂಗ್‌ನಲ್ಲಿ ಮೊದಲ ಚಿನ್ನದ ಪದಕ ಗೆದ್ದ ಭಾರತ

Share

‌ಕ್ರೀಡೆಯಲ್ಲಿ ಭಾರತ (Bharat) ಇತ್ತೀಚೆಗೆ ಮಹತ್ತರ ಸಾಧನೆಗಳನ್ನು ಮಾಡುತ್ತಿದೆ. ಸದ್ಯ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ (Asian Games) ಭಾರತ ತನ್ನ ಮೊದಲ ಚಿನ್ನದ ಪದಕವ (Gold medal) ಗೆದ್ದುಕೊಂಡಿದ್ದು, ಶೂಟಿಂಗ್‌ ನಲ್ಲಿ ಭಾರತಕ್ಕೆ ಈ ಚಿನ್ನದ ಪದಕ ಲಭಿಸಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪವಾರ್, ರುದ್ರಂಕ್ಷ್ ಬಾಳಾಸಾಹೇಬ್ ಮತ್ತು ಐಶ್ವರ್ಯ ತೋಮರ್ ಅವರು ವಿಶ್ವದಾಖಲೆ ನಿರ್ಮಿಸಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.

ಶೂಟಿಂಗ್ ಹೊರತಾಗಿ ಎರಡನೇ ದಿನವೂ ಭಾರತ ರೋಯಿಂಗ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದೆ. 19ನೇ ಏಷ್ಯನ್ ಗೇಮ್ಸ್​ನ ಮೊದಲ ದಿನ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತ ತನ್ನ ಅಭಿಯಾನವನ್ನು ಆರಂಭಿಸಿತ್ತು. ಶೂಟಿಂಗ್‌ನಲ್ಲಿ ಮಹಿಳಾ ತಂಡ ವಿಭಾಗದಲ್ಲಿ ಭಾರತ ಆ ಪದಕ ಗೆದ್ದಿತ್ತು. ಮೊದಲ ದಿನ 3 ಬೆಳ್ಳಿ ಹಾಗೂ 2 ಕಂಚು ಗೆದ್ದಿರುವ ಭಾರತ ಎರಡನೇ ದಿನವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಆರಂಭಿಸಿದೆ.

ವಿಶ್ವ ದಾಖಲೆ ಮುರಿದು ಚಿನ್ನ ಗೆದ್ದ ಭಾರತ ಇನ್ನು ಎರಡನೇ ದಿನವನ್ನು ಚಿನ್ನದ ಪದಕದೊಂದಿಗೆ ಆರಂಭಿಸಿರುವ ಭಾರತದ ಶೂಟರ್‌ಗಳು ಈ ಚಿನ್ನದ ಪದಕದೊಂದಿಗೆ ವಿಶ್ವ ದಾಖಲೆಯನ್ನೂ ಮುರಿದಿದ್ದಾರೆ. ಪುರುಷರ 10 ಮೀಟರ್ ಏರ್ ರೈಫಲ್‌ನ ಟೀಮ್ ಈವೆಂಟ್‌ನಲ್ಲಿ, ಭಾರತದ ಮೂವರು ಶೂಟರ್‌ಗಳಾದ ದಿವ್ಯಾಂಶ್ ಸಿಂಗ್ ಪವಾರ್, ರುದ್ರಂಕ್ಷ್ ಬಾಳಾಸಾಹೇಬ್ ಮತ್ತು ಐಶ್ವರ್ಯ ತೋಮರ್ ಸಂಯೋಜಿತ ಸ್ಕೋರ್‌ನೊಂದಿಗೆ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.

ಈ ಮೂವರೂ ಸೇರಿ 1893.7 ಅಂಕಗಳನ್ನು ಕಲೆಹಾಕಿದ್ದು, ಇದು ಈಗ ಹೊಸ ವಿಶ್ವ ದಾಖಲೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆಯು 1893.3 ಪಾಯಿಂಟ್‌ಗಳಾಗಿದ್ದು, ಇದನ್ನು ಚೀನಾ ಮಾಡಿತ್ತು. ಭಾರತದ ಮೂವರು ಶೂಟರ್‌ಗಳ ಪೈಕಿ ರುದ್ರಂಕ್ಷ್ ಬಾಳಾಸಾಹೇಬ್ ಅವರು 632.5 ಅಂಕಗಳನ್ನು ಗಳಿಸಿದರು. ಇವರಲ್ಲದೆ ಐಶ್ವರ್ಯಾ ತೋಮರ್ 631.6 ಅಂಕ ಗಳಿಸಿದರೆ, ದಿವ್ಯಾನ್ಶ್ ಪವಾರ್ 629.6 ಅಂಕ ಗಳಿಸಿದರು.

ರೋಯಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಕಂಚು ಶೂಟಿಂಗ್​ನಲ್ಲಿ ವಿಶ್ವದಾಖಲೆ ಜತೆಗೆ ಚಿನ್ನ ಗೆದ್ದ ಭಾರತ ಎರಡನೇ ದಿನವೂ ಕಂಚಿನ ಪದಕದ ಬೇಟೆಯಾಡಿದೆ. ರೋಯಿಂಗ್‌ನಲ್ಲಿ ಭಾರತಕ್ಕೆ ಈ ಕಂಚಿನ ಪದಕ ಲಭಿಸಿದೆ. ಇಲ್ಲಿ ಪುರುಷರ ನಾಲ್ಕರ ವಿಭಾಗದ ಫೈನಲ್‌ನಲ್ಲಿ ಜಸ್ವಿಂದರ್, ಭೀಮ್, ಪುನಿತ್ ಮತ್ತು ಆಶಿಶ್ 6:10.81 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

6 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

7 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

7 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

17 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

18 hours ago