ಅಮೆರಿಕದ ಮಾರುಕಟ್ಟೆಗೆ ಪ್ರವೇಶಿಸುವ ಭಾರತೀಯ ರಬ್ಬರ್ ಸರಕುಗಳ ಮೇಲೆ ಪ್ರಸ್ತುತ ವಿಧಿಸಲಾಗಿರುವ ಶೇ.26 ಆಮದು ಸುಂಕದ ಪರಿಣಾಮವಾಗಿ ಭಾರತೀಯ ರಬ್ಬರ್ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಖರೀದಿದಾರರು ಭಾರತೀಯ ರಬ್ಬರ್ ಉದ್ಯಮಗಳಿಗೆ ಸಲಹೆ ನೀಡಿದ್ದಾರೆ.…..ಮುಂದೆ ಓದಿ….
ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ. ಈಗಾಗಲೇ ಯುಎಸ್ನಲ್ಲಿರುವ ಖರೀದಿದಾರರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ನಮಗೆ ಸಲಹೆ ನೀಡಿದ್ದಾರೆ ಎಂದು ಕೈಗಾರಿಕಾ ಸಂಘ ಹೇಳಿದೆ. ಈಗ ಇರುವ ದಾಸ್ತಾನು ಕ್ಲಿಯರ್ ಮಾಡುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಆ ದಾಸ್ತಾನುಗಳು ಖಾಲಿಯಾದ ನಂತರವೇ ಹೊಸ ಬೇಡಿಕೆ ಬರಲಿದೆ. ಆ ಹೊತ್ತಿಗೆ ಬೆಲೆಯೂ ನಿರ್ಣಾಯಕವಾಗಬಹುದು ಎಂದು ರಬ್ಬರ್ ಉದ್ಯಮಗಳ ಪ್ರಮುಖರು ಆತಂಕ ವ್ಯಕ್ತಪಡಿಸಿದ್ದಾರೆ.
ಆಮದು ಸುಂಕದ ಪರಿಣಾಮವಾಗಿ ಟರ್ಕಿ ಮತ್ತು ವಿಯೆಟ್ನಾಂನಿಂದ ಕಡಿಮೆ ದರದಲ್ಲಿ ಆಮದುಗಳು ಯುಎಸ್ ಮಾರುಕಟ್ಟೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಇದು ಭಾರತೀಯ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಬಹುದಾಗಿದೆ. ಟರ್ಕಿಗೆ ಹೋಲಿಸಿದರೆ, ಕೇವಲ ಶೇಕಡಾ 10 ರಷ್ಟು ಆಮದು ಸುಂಕವನ್ನು ವಿಧಿಸಲಾಗುತ್ತದೆ ಹಾಗೂ ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಶೂನ್ಯ ಸುಂಕವನ್ನು ಹೊಂದಿರುವ ವಿಯೆಟ್ನಾಂ ಕೂಡಾ ಲಾಭವನ್ನು ಪಡೆಯಲಿದೆ ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘ ಹೇಳಿದೆ.…..ಮುಂದೆ ಓದಿ….
ಭಾರತದ ರಬ್ಬರ್ ಉದ್ಯಮವು ಸಂಕಷ್ಟ ಎದುರಿಸಿದರೆ ಭಾರತದ ರಬ್ಬರ್ ಬೆಳೆಗಾರರು ಕೂಡಾ ಮತ್ತೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಸದ್ಯ ಕೆಲವು ಸಮಯಗಳಿಂದ ರಬ್ಬರ್ 180 ರೂಪಾಯಿಗಿಂತ ಅಧಿಕ ಧಾರಣೆಯನ್ನು ಹೊಂದಿದೆ. ಸುಂಕದ ಕಾರಣದಿಂದ ರಬ್ಬರ್ ಉದ್ಯಮದ ಅಸ್ಥಿರತೆಯ ಕಾರಣದಿಂದ ವಾರದ ಹಿಂದೆ ಧಾರಣೆಯಲ್ಲೂ ಏರುಪೇರು ಕಂಡು ಬಂದಿದೆ. ಸದ್ಯ ಧಾರಣೆಯ ಮೇಲೆ ಪರಿಣಾಮ ಬಿದ್ದಿಲ್ಲ, ಆದರೆ ದೀರ್ಘಾವಧಿಯಲ್ಲಿ ರಬ್ಬರ್ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ವೇಳೆ ರಬ್ಬರ್ ಆಮದು ಮೇಲೆಯೂ ನಿಯಂತ್ರಣ ಅಗತ್ಯ ಇದೆ ಎಂದು ಬೆಳೆಗಾರರ ಒಕ್ಕೂಟ ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…