Advertisement
MIRROR FOCUS

“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ

Share

ಅಮೆರಿಕದ ಮಾರುಕಟ್ಟೆಗೆ ಪ್ರವೇಶಿಸುವ ಭಾರತೀಯ ರಬ್ಬರ್ ಸರಕುಗಳ ಮೇಲೆ ಪ್ರಸ್ತುತ ವಿಧಿಸಲಾಗಿರುವ ಶೇ.26 ಆಮದು ಸುಂಕದ ಪರಿಣಾಮವಾಗಿ ಭಾರತೀಯ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಖರೀದಿದಾರರು ಭಾರತೀಯ ರಬ್ಬರ್‌ ಉದ್ಯಮಗಳಿಗೆ ಸಲಹೆ ನೀಡಿದ್ದಾರೆ.…..ಮುಂದೆ ಓದಿ….

ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ. ಈಗಾಗಲೇ ಯುಎಸ್‌ನಲ್ಲಿರುವ ಖರೀದಿದಾರರು  ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ನಮಗೆ ಸಲಹೆ ನೀಡಿದ್ದಾರೆ ಎಂದು ಕೈಗಾರಿಕಾ ಸಂಘ ಹೇಳಿದೆ. ಈಗ ಇರುವ ದಾಸ್ತಾನು ಕ್ಲಿಯರ್‌ ಮಾಡುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಆ ದಾಸ್ತಾನುಗಳು ಖಾಲಿಯಾದ ನಂತರವೇ ಹೊಸ ಬೇಡಿಕೆ ಬರಲಿದೆ. ಆ ಹೊತ್ತಿಗೆ ಬೆಲೆಯೂ ನಿರ್ಣಾಯಕವಾಗಬಹುದು ಎಂದು ರಬ್ಬರ್‌ ಉದ್ಯಮಗಳ ಪ್ರಮುಖರು ಆತಂಕ ವ್ಯಕ್ತಪಡಿಸಿದ್ದಾರೆ.

ಆಮದು ಸುಂಕದ ಪರಿಣಾಮವಾಗಿ ಟರ್ಕಿ ಮತ್ತು ವಿಯೆಟ್ನಾಂನಿಂದ ಕಡಿಮೆ ದರದಲ್ಲಿ ಆಮದುಗಳು ಯುಎಸ್ ಮಾರುಕಟ್ಟೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಇದು ಭಾರತೀಯ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಬಹುದಾಗಿದೆ. ಟರ್ಕಿಗೆ ಹೋಲಿಸಿದರೆ, ಕೇವಲ ಶೇಕಡಾ 10 ರಷ್ಟು ಆಮದು ಸುಂಕವನ್ನು ವಿಧಿಸಲಾಗುತ್ತದೆ ಹಾಗೂ ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಶೂನ್ಯ ಸುಂಕವನ್ನು ಹೊಂದಿರುವ ವಿಯೆಟ್ನಾಂ ಕೂಡಾ ಲಾಭವನ್ನು ಪಡೆಯಲಿದೆ ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘ ಹೇಳಿದೆ.…..ಮುಂದೆ ಓದಿ….

ಕೃಷಿ-ಗ್ರಾಮೀಣ-ಪರಿಸರದ ಸುದ್ದಿಗೆ ಆದ್ಯತೆ ನೀಡುವ ನಮ್ಮ ಡಿಜಿಟಲ್‌ ಮೀಡಿಯಾದ ವ್ಯಾಟ್ಸಪ್‌ ಚಾನೆಲ್ ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ….

ಭಾರತದ ರಬ್ಬರ್‌ ಉದ್ಯಮವು ಸಂಕಷ್ಟ ಎದುರಿಸಿದರೆ ಭಾರತದ ರಬ್ಬರ್‌ ಬೆಳೆಗಾರರು ಕೂಡಾ ಮತ್ತೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಸದ್ಯ ಕೆಲವು ಸಮಯಗಳಿಂದ ರಬ್ಬರ್‌ 180 ರೂಪಾಯಿಗಿಂತ ಅಧಿಕ ಧಾರಣೆಯನ್ನು ಹೊಂದಿದೆ. ಸುಂಕದ ಕಾರಣದಿಂದ ರಬ್ಬರ್‌ ಉದ್ಯಮದ ಅಸ್ಥಿರತೆಯ ಕಾರಣದಿಂದ ವಾರದ ಹಿಂದೆ ಧಾರಣೆಯಲ್ಲೂ ಏರುಪೇರು ಕಂಡು ಬಂದಿದೆ. ಸದ್ಯ ಧಾರಣೆಯ ಮೇಲೆ ಪರಿಣಾಮ ಬಿದ್ದಿಲ್ಲ, ಆದರೆ ದೀರ್ಘಾವಧಿಯಲ್ಲಿ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ವೇಳೆ ರಬ್ಬರ್‌ ಆಮದು ಮೇಲೆಯೂ ನಿಯಂತ್ರಣ ಅಗತ್ಯ ಇದೆ ಎಂದು ಬೆಳೆಗಾರರ ಒಕ್ಕೂಟ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

4 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

4 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago