Advertisement
MIRROR FOCUS

“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ

Share

ಅಮೆರಿಕದ ಮಾರುಕಟ್ಟೆಗೆ ಪ್ರವೇಶಿಸುವ ಭಾರತೀಯ ರಬ್ಬರ್ ಸರಕುಗಳ ಮೇಲೆ ಪ್ರಸ್ತುತ ವಿಧಿಸಲಾಗಿರುವ ಶೇ.26 ಆಮದು ಸುಂಕದ ಪರಿಣಾಮವಾಗಿ ಭಾರತೀಯ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಖರೀದಿದಾರರು ಭಾರತೀಯ ರಬ್ಬರ್‌ ಉದ್ಯಮಗಳಿಗೆ ಸಲಹೆ ನೀಡಿದ್ದಾರೆ.…..ಮುಂದೆ ಓದಿ….

Advertisement

ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ. ಈಗಾಗಲೇ ಯುಎಸ್‌ನಲ್ಲಿರುವ ಖರೀದಿದಾರರು  ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ನಮಗೆ ಸಲಹೆ ನೀಡಿದ್ದಾರೆ ಎಂದು ಕೈಗಾರಿಕಾ ಸಂಘ ಹೇಳಿದೆ. ಈಗ ಇರುವ ದಾಸ್ತಾನು ಕ್ಲಿಯರ್‌ ಮಾಡುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಆ ದಾಸ್ತಾನುಗಳು ಖಾಲಿಯಾದ ನಂತರವೇ ಹೊಸ ಬೇಡಿಕೆ ಬರಲಿದೆ. ಆ ಹೊತ್ತಿಗೆ ಬೆಲೆಯೂ ನಿರ್ಣಾಯಕವಾಗಬಹುದು ಎಂದು ರಬ್ಬರ್‌ ಉದ್ಯಮಗಳ ಪ್ರಮುಖರು ಆತಂಕ ವ್ಯಕ್ತಪಡಿಸಿದ್ದಾರೆ.

ಆಮದು ಸುಂಕದ ಪರಿಣಾಮವಾಗಿ ಟರ್ಕಿ ಮತ್ತು ವಿಯೆಟ್ನಾಂನಿಂದ ಕಡಿಮೆ ದರದಲ್ಲಿ ಆಮದುಗಳು ಯುಎಸ್ ಮಾರುಕಟ್ಟೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಇದು ಭಾರತೀಯ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಬಹುದಾಗಿದೆ. ಟರ್ಕಿಗೆ ಹೋಲಿಸಿದರೆ, ಕೇವಲ ಶೇಕಡಾ 10 ರಷ್ಟು ಆಮದು ಸುಂಕವನ್ನು ವಿಧಿಸಲಾಗುತ್ತದೆ ಹಾಗೂ ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಶೂನ್ಯ ಸುಂಕವನ್ನು ಹೊಂದಿರುವ ವಿಯೆಟ್ನಾಂ ಕೂಡಾ ಲಾಭವನ್ನು ಪಡೆಯಲಿದೆ ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘ ಹೇಳಿದೆ.…..ಮುಂದೆ ಓದಿ….

ಕೃಷಿ-ಗ್ರಾಮೀಣ-ಪರಿಸರದ ಸುದ್ದಿಗೆ ಆದ್ಯತೆ ನೀಡುವ ನಮ್ಮ ಡಿಜಿಟಲ್‌ ಮೀಡಿಯಾದ ವ್ಯಾಟ್ಸಪ್‌ ಚಾನೆಲ್ ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ….

ಭಾರತದ ರಬ್ಬರ್‌ ಉದ್ಯಮವು ಸಂಕಷ್ಟ ಎದುರಿಸಿದರೆ ಭಾರತದ ರಬ್ಬರ್‌ ಬೆಳೆಗಾರರು ಕೂಡಾ ಮತ್ತೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಸದ್ಯ ಕೆಲವು ಸಮಯಗಳಿಂದ ರಬ್ಬರ್‌ 180 ರೂಪಾಯಿಗಿಂತ ಅಧಿಕ ಧಾರಣೆಯನ್ನು ಹೊಂದಿದೆ. ಸುಂಕದ ಕಾರಣದಿಂದ ರಬ್ಬರ್‌ ಉದ್ಯಮದ ಅಸ್ಥಿರತೆಯ ಕಾರಣದಿಂದ ವಾರದ ಹಿಂದೆ ಧಾರಣೆಯಲ್ಲೂ ಏರುಪೇರು ಕಂಡು ಬಂದಿದೆ. ಸದ್ಯ ಧಾರಣೆಯ ಮೇಲೆ ಪರಿಣಾಮ ಬಿದ್ದಿಲ್ಲ, ಆದರೆ ದೀರ್ಘಾವಧಿಯಲ್ಲಿ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ವೇಳೆ ರಬ್ಬರ್‌ ಆಮದು ಮೇಲೆಯೂ ನಿಯಂತ್ರಣ ಅಗತ್ಯ ಇದೆ ಎಂದು ಬೆಳೆಗಾರರ ಒಕ್ಕೂಟ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

26 minutes ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

5 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

6 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

6 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

14 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

14 hours ago