Advertisement
MIRROR FOCUS

“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ

Share

ಅಮೆರಿಕದ ಮಾರುಕಟ್ಟೆಗೆ ಪ್ರವೇಶಿಸುವ ಭಾರತೀಯ ರಬ್ಬರ್ ಸರಕುಗಳ ಮೇಲೆ ಪ್ರಸ್ತುತ ವಿಧಿಸಲಾಗಿರುವ ಶೇ.26 ಆಮದು ಸುಂಕದ ಪರಿಣಾಮವಾಗಿ ಭಾರತೀಯ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಖರೀದಿದಾರರು ಭಾರತೀಯ ರಬ್ಬರ್‌ ಉದ್ಯಮಗಳಿಗೆ ಸಲಹೆ ನೀಡಿದ್ದಾರೆ.…..ಮುಂದೆ ಓದಿ….

ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ. ಈಗಾಗಲೇ ಯುಎಸ್‌ನಲ್ಲಿರುವ ಖರೀದಿದಾರರು  ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ನಮಗೆ ಸಲಹೆ ನೀಡಿದ್ದಾರೆ ಎಂದು ಕೈಗಾರಿಕಾ ಸಂಘ ಹೇಳಿದೆ. ಈಗ ಇರುವ ದಾಸ್ತಾನು ಕ್ಲಿಯರ್‌ ಮಾಡುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಆ ದಾಸ್ತಾನುಗಳು ಖಾಲಿಯಾದ ನಂತರವೇ ಹೊಸ ಬೇಡಿಕೆ ಬರಲಿದೆ. ಆ ಹೊತ್ತಿಗೆ ಬೆಲೆಯೂ ನಿರ್ಣಾಯಕವಾಗಬಹುದು ಎಂದು ರಬ್ಬರ್‌ ಉದ್ಯಮಗಳ ಪ್ರಮುಖರು ಆತಂಕ ವ್ಯಕ್ತಪಡಿಸಿದ್ದಾರೆ.

ಆಮದು ಸುಂಕದ ಪರಿಣಾಮವಾಗಿ ಟರ್ಕಿ ಮತ್ತು ವಿಯೆಟ್ನಾಂನಿಂದ ಕಡಿಮೆ ದರದಲ್ಲಿ ಆಮದುಗಳು ಯುಎಸ್ ಮಾರುಕಟ್ಟೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಇದು ಭಾರತೀಯ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಬಹುದಾಗಿದೆ. ಟರ್ಕಿಗೆ ಹೋಲಿಸಿದರೆ, ಕೇವಲ ಶೇಕಡಾ 10 ರಷ್ಟು ಆಮದು ಸುಂಕವನ್ನು ವಿಧಿಸಲಾಗುತ್ತದೆ ಹಾಗೂ ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಶೂನ್ಯ ಸುಂಕವನ್ನು ಹೊಂದಿರುವ ವಿಯೆಟ್ನಾಂ ಕೂಡಾ ಲಾಭವನ್ನು ಪಡೆಯಲಿದೆ ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘ ಹೇಳಿದೆ.…..ಮುಂದೆ ಓದಿ….

ಕೃಷಿ-ಗ್ರಾಮೀಣ-ಪರಿಸರದ ಸುದ್ದಿಗೆ ಆದ್ಯತೆ ನೀಡುವ ನಮ್ಮ ಡಿಜಿಟಲ್‌ ಮೀಡಿಯಾದ ವ್ಯಾಟ್ಸಪ್‌ ಚಾನೆಲ್ ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ….

ಭಾರತದ ರಬ್ಬರ್‌ ಉದ್ಯಮವು ಸಂಕಷ್ಟ ಎದುರಿಸಿದರೆ ಭಾರತದ ರಬ್ಬರ್‌ ಬೆಳೆಗಾರರು ಕೂಡಾ ಮತ್ತೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಸದ್ಯ ಕೆಲವು ಸಮಯಗಳಿಂದ ರಬ್ಬರ್‌ 180 ರೂಪಾಯಿಗಿಂತ ಅಧಿಕ ಧಾರಣೆಯನ್ನು ಹೊಂದಿದೆ. ಸುಂಕದ ಕಾರಣದಿಂದ ರಬ್ಬರ್‌ ಉದ್ಯಮದ ಅಸ್ಥಿರತೆಯ ಕಾರಣದಿಂದ ವಾರದ ಹಿಂದೆ ಧಾರಣೆಯಲ್ಲೂ ಏರುಪೇರು ಕಂಡು ಬಂದಿದೆ. ಸದ್ಯ ಧಾರಣೆಯ ಮೇಲೆ ಪರಿಣಾಮ ಬಿದ್ದಿಲ್ಲ, ಆದರೆ ದೀರ್ಘಾವಧಿಯಲ್ಲಿ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ವೇಳೆ ರಬ್ಬರ್‌ ಆಮದು ಮೇಲೆಯೂ ನಿಯಂತ್ರಣ ಅಗತ್ಯ ಇದೆ ಎಂದು ಬೆಳೆಗಾರರ ಒಕ್ಕೂಟ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

5 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

5 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

5 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

5 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

5 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

13 hours ago