Advertisement
MIRROR FOCUS

“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ

Share

ಅಮೆರಿಕದ ಮಾರುಕಟ್ಟೆಗೆ ಪ್ರವೇಶಿಸುವ ಭಾರತೀಯ ರಬ್ಬರ್ ಸರಕುಗಳ ಮೇಲೆ ಪ್ರಸ್ತುತ ವಿಧಿಸಲಾಗಿರುವ ಶೇ.26 ಆಮದು ಸುಂಕದ ಪರಿಣಾಮವಾಗಿ ಭಾರತೀಯ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಖರೀದಿದಾರರು ಭಾರತೀಯ ರಬ್ಬರ್‌ ಉದ್ಯಮಗಳಿಗೆ ಸಲಹೆ ನೀಡಿದ್ದಾರೆ.…..ಮುಂದೆ ಓದಿ….

ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ. ಈಗಾಗಲೇ ಯುಎಸ್‌ನಲ್ಲಿರುವ ಖರೀದಿದಾರರು  ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ನಮಗೆ ಸಲಹೆ ನೀಡಿದ್ದಾರೆ ಎಂದು ಕೈಗಾರಿಕಾ ಸಂಘ ಹೇಳಿದೆ. ಈಗ ಇರುವ ದಾಸ್ತಾನು ಕ್ಲಿಯರ್‌ ಮಾಡುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಆ ದಾಸ್ತಾನುಗಳು ಖಾಲಿಯಾದ ನಂತರವೇ ಹೊಸ ಬೇಡಿಕೆ ಬರಲಿದೆ. ಆ ಹೊತ್ತಿಗೆ ಬೆಲೆಯೂ ನಿರ್ಣಾಯಕವಾಗಬಹುದು ಎಂದು ರಬ್ಬರ್‌ ಉದ್ಯಮಗಳ ಪ್ರಮುಖರು ಆತಂಕ ವ್ಯಕ್ತಪಡಿಸಿದ್ದಾರೆ.

ಆಮದು ಸುಂಕದ ಪರಿಣಾಮವಾಗಿ ಟರ್ಕಿ ಮತ್ತು ವಿಯೆಟ್ನಾಂನಿಂದ ಕಡಿಮೆ ದರದಲ್ಲಿ ಆಮದುಗಳು ಯುಎಸ್ ಮಾರುಕಟ್ಟೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಇದು ಭಾರತೀಯ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಬಹುದಾಗಿದೆ. ಟರ್ಕಿಗೆ ಹೋಲಿಸಿದರೆ, ಕೇವಲ ಶೇಕಡಾ 10 ರಷ್ಟು ಆಮದು ಸುಂಕವನ್ನು ವಿಧಿಸಲಾಗುತ್ತದೆ ಹಾಗೂ ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಶೂನ್ಯ ಸುಂಕವನ್ನು ಹೊಂದಿರುವ ವಿಯೆಟ್ನಾಂ ಕೂಡಾ ಲಾಭವನ್ನು ಪಡೆಯಲಿದೆ ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘ ಹೇಳಿದೆ.…..ಮುಂದೆ ಓದಿ….

ಕೃಷಿ-ಗ್ರಾಮೀಣ-ಪರಿಸರದ ಸುದ್ದಿಗೆ ಆದ್ಯತೆ ನೀಡುವ ನಮ್ಮ ಡಿಜಿಟಲ್‌ ಮೀಡಿಯಾದ ವ್ಯಾಟ್ಸಪ್‌ ಚಾನೆಲ್ ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ….

ಭಾರತದ ರಬ್ಬರ್‌ ಉದ್ಯಮವು ಸಂಕಷ್ಟ ಎದುರಿಸಿದರೆ ಭಾರತದ ರಬ್ಬರ್‌ ಬೆಳೆಗಾರರು ಕೂಡಾ ಮತ್ತೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಸದ್ಯ ಕೆಲವು ಸಮಯಗಳಿಂದ ರಬ್ಬರ್‌ 180 ರೂಪಾಯಿಗಿಂತ ಅಧಿಕ ಧಾರಣೆಯನ್ನು ಹೊಂದಿದೆ. ಸುಂಕದ ಕಾರಣದಿಂದ ರಬ್ಬರ್‌ ಉದ್ಯಮದ ಅಸ್ಥಿರತೆಯ ಕಾರಣದಿಂದ ವಾರದ ಹಿಂದೆ ಧಾರಣೆಯಲ್ಲೂ ಏರುಪೇರು ಕಂಡು ಬಂದಿದೆ. ಸದ್ಯ ಧಾರಣೆಯ ಮೇಲೆ ಪರಿಣಾಮ ಬಿದ್ದಿಲ್ಲ, ಆದರೆ ದೀರ್ಘಾವಧಿಯಲ್ಲಿ ರಬ್ಬರ್‌ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ವೇಳೆ ರಬ್ಬರ್‌ ಆಮದು ಮೇಲೆಯೂ ನಿಯಂತ್ರಣ ಅಗತ್ಯ ಇದೆ ಎಂದು ಬೆಳೆಗಾರರ ಒಕ್ಕೂಟ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago