Advertisement
ರಾಷ್ಟ್ರೀಯ

ಡಾಲರ್‌ ಎದುರು ಮತ್ತೆ ಕುಸಿತಗೊಂಡ ರೂಪಾಯಿ ಮೌಲ್ಯ | ಅತ್ಯಂತ ಕನಿಷ್ಟ ಮಟ್ಟಕ್ಕೆ ಕುಸಿತ ಕಂಡ ರೂಪಾಯಿ |

Share

ಡಾಲರ್ ಎದುರು ರೂಪಾಯಿ ಮೌಲ್ಯ 80.50 ರೂಪಾಯಿಯ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದು ಸಾರ್ವಕಾಲಿಕ ಪತನವಾಗಿದ್ದು,ಎರಡು ದಶಕಗಳಲ್ಲಿಯೇ ಅತ್ಯಂತ ಕನಿಷ್ಟ ಕುಸಿತವಾಗಿದೆ.   

ಸತತ 2 ದಿನಗಳಿಂದ ಭಾರತೀಯ ಷೇರುಮಾರುಕಟ್ಟೆಯೂ ಕುಸಿತ ಕಂಡಿದೆ. ಇದರ ಬೆನ್ನಲ್ಲೇ ರೂಪಾಯಿ ಮೌಲ್ಯ ಕೂಡ  ಕುಸಿತ ಕಾಣುತ್ತಿದೆ. ಗುರುವಾರ ರೂಪಾಯಿ ಮೌಲ್ಯದಲ್ಲಿ 51 ಪೈಸೆ ಕುಸಿತವಾಗಿದ್ದು, ಡಾಲರ್‌ ಎದುರು ರೂಪಾಯಿ ಮೌಲ್ಯ 80.47 ಕ್ಕೆ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ಕುಸಿದಿದೆ.  ಬುಧವಾರ ಡಾಲರ್ ಎದುರು ರೂಪಾಯಿ 22 ಪೈಸೆ ಕುಸಿತ ಕಂಡು 79.96ಕ್ಕೆ ತಲುಪಿತ್ತು.

ಅಮೇರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರವನ್ನು ಮತ್ತೆ 75 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆಯಿತು. ಇದು ಹೆಚ್ಚುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿದ್ದಕ್ಕೆ ಮಾರುಕಟ್ಟೆ ನೀಡಿರುವ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ರೂಪಾಯಿ ಮೌಲ್ಯ ಕುಸಿಯುವುದನ್ನು ತಡೆ ಹಿಡಿಯಲು ರಿಸರ್ವ್‌ ಬ್ಯಾಂಕ್‌  ವಿದೇಶಿ ವಿನಿಮಯವನ್ನು ಖರ್ಚು ಮಾಡುತ್ತಲೇ ಇದೆ. ಫೆಬ್ರವರಿಯಲ್ಲಿ ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಿದಾಗಿನಿಂದ ಆರ್‌ಬಿಐ 80 ಬಿಲಿಯನ್‌ ಡಾಲರ್‌ ಮೌಲ್ಯದ ವಿದೇಶಿ ವಿನಿಮಯವನ್ನು ಖರ್ಚು ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago