ISRO ವಿಜ್ಞಾನಿಗಳ ಬೆಂಬಲಕ್ಕೆ ಪ್ರಧಾನಿ ಮೋದಿ ಸದಾ ನಿಂತಿದ್ದಾರೆ. ಇನ್ನಷ್ಟು ಸಾಧನೆಗಳನ್ನು ಮಾಡಬೇಕು ಅನ್ನುವುದು ಮೋದಿಯವರ ಗುರಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಸಭೆಯನ್ನು ಕರೆದಿದ್ದರು. ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಗಗನಯಾತ್ರಿಗಳನ್ನು (Astronaut To Moon) ಕಳುಹಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಭವಿಷ್ಯದ ಪರಿಶೋಧನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇಸ್ರೋ (ISRO) ಅಧ್ಯಕ್ಷ ಸೋಮನಾಥ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳ ಭವಿಷ್ಯದ ಕುರಿತ ಸಭೆಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳಿಗೆ ಕಾರ್ಯಾಚರಣೆಯಲ್ಲಿ ಕೆಲಸ ಮಾಡಲು ವಿಜ್ಞಾನಿಗಳಿಗೆ ಮೋದಿ ಕರೆ ನೀಡಿದ್ದಾರೆ.
Establishment of Indian space station in space by 2035. PM directs ISRO scientists that India should now aim for new and ambitious goals, including sending first Indian to Moon by 2040
ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ…