ಕೃಷಿ ಉತ್ತೇಜನಕ್ಕೆ ನಿಂತ ಭಾರತೀಯ ರೈಲ್ವೆ ಇಲಾಖೆ | ಭತ್ತದ ಕೊಯ್ಲು ಯಂತ್ರ ರವಾನೆಗೆ ಸಹಕಾರ |

January 24, 2022
8:43 PM

ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕೃಷಿ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ರೈಲ್ವೇ ಇಲಾಖೆ ಸಹಕಾರ ನೀಡಿದೆ.

ಗಂಗಾವತಿ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ರೈಲ್ವೆ ಬೋಗಿಗಳ ಮೂಲಕ ಸಾಗಾಟ ಮಾಡಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ. ನೂರಾರು ಭತ್ತದ ಕೊಯ್ಲು ಯಂತ್ರಗಳು ಜಿಲ್ಲೆಯಿಂದ ರೈಲು ಮೂಲಕ ತಮಿಳುನಾಡಿಗೆ ವಲಸೆ ಶುರು ಮಾಡಿವೆ. ಈ ಬಗ್ಗೆ ಹುಬ್ಬಳ್ಳಿಯ ಡೆಪ್ಯೂಟಿ ರೈಲ್ವೆ ಮ್ಯಾನೇಜರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಯಂತ್ರಗಳ ಸಾಗಣೆಯನ್ನು ಉಲ್ಲೇಖಿಸಿದ್ದಾರೆ.

ಸಾರ್ವಜನಿಕರಿಗೆ ಉತ್ತಮ ಸಾರಿಗೆ ಹಾಗೂ ಸರಕು ಸಾಗಾಣಿಕೆಯ ಸೇವೆಯನ್ನು ನೀಡುತ್ತಿರುವ ಮೂಲಕ ಭಾರತೀಯ ರೈಲ್ವೆ ಇಲಾಖೆ ಇಂದು ಕೃಷಿ ಉತ್ತೇಜನಕ್ಕೆ ಸಹ ಸಾಕ್ಷಿಯಾಗಿ ನಿಂತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror