ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕೃಷಿ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ರೈಲ್ವೇ ಇಲಾಖೆ ಸಹಕಾರ ನೀಡಿದೆ.
ಗಂಗಾವತಿ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ರೈಲ್ವೆ ಬೋಗಿಗಳ ಮೂಲಕ ಸಾಗಾಟ ಮಾಡಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ. ನೂರಾರು ಭತ್ತದ ಕೊಯ್ಲು ಯಂತ್ರಗಳು ಜಿಲ್ಲೆಯಿಂದ ರೈಲು ಮೂಲಕ ತಮಿಳುನಾಡಿಗೆ ವಲಸೆ ಶುರು ಮಾಡಿವೆ. ಈ ಬಗ್ಗೆ ಹುಬ್ಬಳ್ಳಿಯ ಡೆಪ್ಯೂಟಿ ರೈಲ್ವೆ ಮ್ಯಾನೇಜರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಯಂತ್ರಗಳ ಸಾಗಣೆಯನ್ನು ಉಲ್ಲೇಖಿಸಿದ್ದಾರೆ.
ಸಾರ್ವಜನಿಕರಿಗೆ ಉತ್ತಮ ಸಾರಿಗೆ ಹಾಗೂ ಸರಕು ಸಾಗಾಣಿಕೆಯ ಸೇವೆಯನ್ನು ನೀಡುತ್ತಿರುವ ಮೂಲಕ ಭಾರತೀಯ ರೈಲ್ವೆ ಇಲಾಖೆ ಇಂದು ಕೃಷಿ ಉತ್ತೇಜನಕ್ಕೆ ಸಹ ಸಾಕ್ಷಿಯಾಗಿ ನಿಂತಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…