ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

March 13, 2026
8:47 PM
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ ಸವಾಲುಗಳು ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಉದ್ಯಮ ಸಂಘಟನೆ ಸರ್ಕಾರದ ತಕ್ಷಣದ ನೀತಿ ನೆರವು ಕೋರಿ ಮನವಿ ಮಾಡಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತೀಯ ಟಯರ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉದ್ಯಮ ಸಂಘಟನೆ ಸರ್ಕಾರದ ನೆರವು ಕೋರಿ ಮನವಿ ಸಲ್ಲಿಸಿದೆ.

ಯುದ್ಧದಿಂದ ಟಯರ್ ರಫ್ತು ವ್ಯತ್ಯಯಗೊಳ್ಳುವ ಸಾಧ್ಯತೆ, ಕಚ್ಚಾ ವಸ್ತುಗಳ ವೆಚ್ಚ ಏರಿಕೆ ಹಾಗೂ ಲಾಜಿಸ್ಟಿಕ್ಸ್ ಸವಾಲುಗಳು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎಂದು ಉದ್ಯಮ ಸಂಘಟನೆ ತಿಳಿಸಿದೆ.

ಭಾರತವು ಪ್ರತಿವರ್ಷ ಸುಮಾರು 250–260 ಮಿಲಿಯನ್ ಡಾಲರ್ ಮೌಲ್ಯದ ಟಯರ್ ಗಳನ್ನು ಪಶ್ಚಿಮ ಏಷ್ಯಾಕ್ಕೆ ರಫ್ತು ಮಾಡುತ್ತದೆ, ಈ ಮಾರುಕಟ್ಟೆ ಯುದ್ಧದಿಂದ ಹೊಡೆತ ಅನುಭವಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ನೈಸರ್ಗಿಕ ಅನಿಲ ಮತ್ತು LPG ಮುಂತಾದ ಇಂಧನಗಳು ಟಯರ್ ಉತ್ಪಾದನೆಯಲ್ಲಿ ಪ್ರಮುಖವಾಗಿರುವುದರಿಂದ ಟಯರ್ ಉದ್ಯಮ ಹಾಗೂ ಅದರ ಸರಬರಾಜು ಸರಪಳಿಯನ್ನು ಅತ್ಯಾವಶ್ಯಕ ಕ್ಷೇತ್ರ ಎಂದು ವರ್ಗೀಕರಿಸುವಂತೆ ಸರ್ಕಾರವನ್ನು ಉದ್ಯಮ ಸಂಘಟನೆ ಮನವಿ ಮಾಡಿದೆ.

ಕ್ರೂಡ್ ಆಯಿಲ್ ಬೆಲೆ ಅಸ್ಥಿರತೆಯೂ ಟಯರ್ ಉತ್ಪಾದನೆಗೆ ದೊಡ್ಡ ಹೊಡೆತ ನೀಡಬಹುದು. ಏಕೆಂದರೆ ಟಯರ್ ಉತ್ಪಾದನೆ ವೆಚ್ಚದಲ್ಲಿ 60–70% ವರೆಗೆ ಕ್ರೂಡ್ ಆಯಿಲ್ ಉತ್ಪನ್ನಗಳ ಪಾಲು ಇದೆ, ಇದರಿಂದ ವೆಚ್ಚ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ಹಾರ್ಮುಜ್ ಜಲಸಂಧಿ ಹಾಗೂ ಸೂಯೆಝ್ ಕಾಲುವೆ ಮಾರ್ಗಗಳಲ್ಲಿ ಉಂಟಾಗುವ ವ್ಯತ್ಯಯಗಳು ಯುರೋಪ್, ಅಮೆರಿಕಾ ಮತ್ತು ಆಫ್ರಿಕಾ ಮಾರುಕಟ್ಟೆಗಳಿಗೂ ರಫ್ತಿಗೆ ತೊಂದರೆ ಉಂಟುಮಾಡಬಹುದು ಎಂದು ಉದ್ಯಮ ಎಚ್ಚರಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India’s tyre industry has sought government support amid the ongoing West Asia conflict, citing risks of export disruptions, rising crude-linked input costs and logistical challenges. The industry has urged policy measures and essential sector classification to ensure uninterrupted fuel supply and maintain competitiveness.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror