Advertisement
ಸುದ್ದಿಗಳು

ಬಡತನದಿಂದ ಹೊರಕ್ಕೆ ಬಂದ ಭಾರತದ 13.5 ಕೋಟಿ ಮಂದಿ | ನೀತಿ ಆಯೋಗ ವರದಿ

Share

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರು ಜನ ಇನ್ನೂ ಬಡತನದ ಬೇಗೆಯಲ್ಲಿ ಬೇಯುತ್ತಿದ್ದಾರೆ. ಅದೆಷ್ಟೋ ಮಂದಿ ಒಂದೊತ್ತಿನ ಊಟ, ವಸತಿ, ಶಿಕ್ಷಣಕ್ಕಾಗಿ ಪರದಾಡುತ್ತಿದ್ದಾರೆ. ನಮ್ಮನ್ನು ಆಳಿದವರು ಕಾರಣವಾದರೆ, ಜನಸಂಂಖ್ಯೆಯೂ ಇದಕ್ಕೆ ಮತ್ತೊಂದು ಕಾರಣ. ಆದರೆ ಇಲ್ಲೊಂದು ಸಮಾಧಾನಕರ ವರದಿಯೊಂದು ಬಂದಿದೆ. ಭಾರತದಲ್ಲಿ 2015-16ರಿಂದ 2019-21ರ ಅವಧಿಯಲ್ಲಿ ಬಹು ಆಯಾಮದ ಬಡತನದಿಂದ 13.5 ಕೋಟಿ ಜನರು ಹೊರಬಂದಿದ್ದಾರೆ ಎಂದು ನೀತಿ ಆಯೋಗ್​ನ ವರದಿಯೊಂದು ತಿಳಿಸಿದೆ.

ಭಾರತದಲ್ಲಿ 2005ರಿಂದ 15 ವರ್ಷದ ಅವಧಿಯಲ್ಲಿ 41ಕೋಟಿ ಭಾರತೀಯರು ಬಹು ಆಯಾಮಗಳ ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ವಿಶ್ವಸಂಸ್ಥೆಯ ಅಧ್ಯಯನ ವರದಿಯೊಂದು ಹೇಳಿತ್ತು. ಇದೀಗ ಭಾರತದ ನೀತಿ ಆಯೋಗ  2015ರಿಂದ ಈಚೆಗಿನ ಬಡತನ ನಿರ್ಮೂಲನೆಯ ಮಾಹಿತಿ ಪ್ರಕಟಿಸಿದೆ. ‘ನ್ಯಾಷನಲ್ ಮಲ್ಟಿಡೈಮೆನ್ಷನಲ್ ಪಾವರ್ಟಿ ಇಂಡೆಕ್ಸ್: ಎ ಪ್ರೋಗ್ರೆಸ್ ರಿವ್ಯೂ 2023’ ಜುಲೈ 17ರಂದು ಬಿಡುಗಡೆ ಮಾಡಿದ ವರದಿ ಪ್ರಕಾರ 2015-16ರಿಂದ 2019-21ರ ಅವಧಿಯಲ್ಲಿ 13.5 ಕೋಟಿ ಭಾರತೀಯರು ಬಹು ಆಯಾಮದ ಬಡತನದಿಂದ ತಪ್ಪಿಸಿಕೊಂಡಿದ್ದಾರೆ.

 ಜುಲೈ 11ಎಂದು ಪ್ರಕಟವಾದ ಈ ವರದಿ ಪ್ರಕಾರ, 2005ರ ಏಪ್ರಿಲ್​ನಿಂದ 2020ರ ಮಾರ್ಚ್​ವರೆಗಿನ ಅವಧಿಯಲ್ಲಿ 41.5 ಕೋಟಿ ಭಾರತೀಯರು ಬಡತನ ರೇಖೆಯಿಂದ ಮೇಲೇರಿರುವುದು ತಿಳಿದುಬಂದಿದೆ. 2005/06ರಲ್ಲಿ ಭಾರತದಲ್ಲಿ ಬಡತನ ಶೇ. 55.1ರಷ್ಟಿತ್ತು. 2019/2021ರ ಅವಧಿಯಲ್ಲಿ ಇದರ ಪ್ರಮಾಣ ಶೇ. 16.4ಕ್ಕೆ ಇಳಿಮುಖವಾಗಿದೆ. 2005/06ರಲ್ಲಿ ಭಾರತದಲ್ಲಿ 64.5 ಕೋಟಿ ಜನರು ಬಹು ಆಯಾಮಗಳ ಬಡತನಕ್ಕೆ ಸಿಲುಕಿದ್ದರು. 2015/16ರಲ್ಲಿ ಇದು 37 ಕೋಟಿಗೆ ಇಳಿಯಿತು. 2019/21ರಲ್ಲಿ ಈ ಸಂಖ್ಯೆ 23 ಕೋಟಿಗೆ ಬಂದಿದೆ.

ಬಡವರ ಸಂಖ್ಯೆ ಅತಿಹೆಚ್ಚು ಇಳಿಮುಖಗೊಂಡಿರುವ ರಾಜ್ಯಗಳಲ್ಲಿ ಉತ್ತರಪ್ರದೇಶ ಮೊದಲ ಸ್ಥಾನ ಪಡೆದಿದೆ. ಬಿಹಾರ, ಮಧ್ಯಪ್ರದೇಶ, ಒಡಿಶಾ ಮತ್ತು ರಾಜಸ್ಥಾನದಲ್ಲೂ ಗಮಾರ್ಹ ಪ್ರಮಾಣದಲ್ಲಿ ಬಡತನ ಕಡಿಮೆ ಆಗಿದೆ.
36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 707 ಆಡಳಿತಾತ್ಮಕ ಜಿಲ್ಲೆಗಳಲ್ಲಿನ ಬಡತನದ ಅಂಕಿ ಅಂಶಗಳನ್ನು ಹೊರತೆಗೆದಿರುವ ನೀತಿ ಆಯೋಗ್, ಈ 5 ವರ್ಷದಲ್ಲಿ ಉತ್ತರಪ್ರದೇಶದಲ್ಲಿ 3.43 ಕೋಟಿ ಮಂದಿ ಬಡತನದ ಪೊರೆ ಕಳಚಿ ಹೊರಬಂದಿರುವುದನ್ನು ಎತ್ತಿತೋರಿಸಿದೆ.

‘2015-16ರಿಂದ 2019-21ರ ಅವಧಿಯಲ್ಲಿ ಭಾರತದಲ್ಲಿ ಮಲ್ಟಿಡೈಮೆನ್ಷನಲ್ ಪಾವರ್ಟಿ ಇಂಡೆಕ್ಸ್ (ಎಂಪಿಐ) ಮೌಲ್ಯ ಅರ್ಧದಷ್ಟು ಕಡಿಮೆ ಆಗಿದೆ. 0.117ರಷ್ಟಿದ್ದ ಎಂಪಿಐ ಮೌಲ್ಯ 0.066ಕ್ಕೆ ಇಳಿದಿದೆ. ಬಡತನದ ತೀವ್ರತೆಯೂ ಶೇ. 47ರಿಂದ ಶೇ. 44ಕ್ಕೆ ಇಳಿದಿದೆ. ಬಡತನ ನಿರ್ಮೂಲನೆಯ ಕಾರ್ಯದಲ್ಲಿ 2030ಕ್ಕೆ ನಿಗದಿ ಮಾಡಿದ ಗುರಿಯನ್ನು ಬಹಳ ಬೇಗನೇ ಭಾರತ ಮುಟ್ಟುತ್ತಿದೆ’ ಎಂದು ನೀತಿ ಆಯೋಗ್​ನ ಈ ವರದಿಯಲ್ಲಿ ಹೇಳಲಾಗಿದೆ.

ಕೃಪೆ : ಅಂತರ್ಜಾಲ 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

14 minutes ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

9 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

13 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago