ಸದ್ಯ ನಮ್ಮ ದೇಶ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಹವಾಮಾನ ವೈಪರಿತ್ಯ. ಇಡೀ ಪ್ರಪಂಚವೇ ಕುದಿಯುತ್ತಿದೆ. ಭಾರತ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ ಆದರೂ ಸಮಸ್ಯೆ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಈ ನಡುವೆಯೇ ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ನೇತೃತ್ವ ವಹಿಸಬೇಕು ಎಂದು ಮಿಲೇನಿಯರ್, ಮೈಕ್ರೋಸಾಫ್ಟ್ನ ಸಹಸಂಸ್ಥಾಪಕ ಬಿಲ್ಗೇಟ್ಸ್ ಕರೆ ನೀಡಿದ್ದಾರೆ.
ಹವಾಮಾನ ವೈಪರೀತ್ಯ ಸಮಸ್ಯೆಗೆ ವೈಜ್ಞಾನಿಕ ಆವಿಷ್ಕಾರದ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಅದಕ್ಕೆ ಭಾರತ ನೇತೃತ್ವ ವಹಿಸಬೇಕು ಎಂದು ಮೈಕ್ರೋಸಾಫ್ಟ್ನ ಸಹಸಂಸ್ಥಾಪಕ ಬಿಲ್ಗೇಟ್ಸ್ ಕರೆ ನೀಡಿದ್ದಾರೆ.
ತಮ್ಮ ಬ್ಲಾಗ್ನಲ್ಲಿ ಅವರು, ಜಗತ್ತಿನಲ್ಲಿ ತಲೆದೂರಿರುವ ಜಾಗತಿಕ ಸಮಸ್ಯೆಯನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಭಾರತದ ಸಾಧನೆ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತವು ನನಗೆ ಮುಂದಿನ ಭವಿಷ್ಯದ ಹೊಸ ಭರವಸೆಯನ್ನು ನೀಡುತ್ತದೆ.
ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲು ಹೊರಟಿದೆ, ಇನ್ನೂ, ಭಾರತವು ದೊಡ್ಡ ಸವಾಲುಗಳನ್ನು ನಿಭಾಯಿಸಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.
ಇದು ಪ್ರತಿ ವರ್ಷವೂ ಪರಿಸರ ಸ್ವಲ್ಪಮಟ್ಟಿಗೆ ಹದಗೆಡುತ್ತಲೇ ಹೋಗುತ್ತದೆ, ಇದು ಸರಿಪಡಿಸಲು ಕಷ್ಟಕರವಾದ ವಿಷಯಗಳಲ್ಲಿ ಒಂದಾಗಿದೆ. ಏಕೆಂದರೆ ಜಗತ್ತಿನಾದ್ಯಂತ ಆಧುನಿಕ ಆರ್ಥಿಕತೆಗಳು ಶಕ್ತಿಯ ತೀವ್ರತೆಯನ್ನು ಆಧರಿಸಿವೆ ಮತ್ತು ಈ ಶಕ್ತಿಯ 80 ಪ್ರತಿಶತದಷ್ಟು ಹೈಡ್ರೋಕಾರ್ಬನ್ಗಳನ್ನು ಸುಡುತ್ತದೆ. ಹೀಗಾಗಿ ವಾತಾವರಣದ ಉಷ್ಣತೆಯಲ್ಲಿ ಏರುಪೇರು ಇರುತ್ತದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…