Opinion

ಭಾರತದ ಕೃಷಿ ಮುಂಗಾರು ಜೊತೆಗೆ ಹೋರಾಟ..!| ಲಾಭ-ನಷ್ಟ ಸಮಾನವಾಗಿ ಸ್ವೀಕರಿಸಲು ಸಾಧ್ಯವೇ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿನ್ನೆಯ ದಿನ ಅಪರೂಪದಲ್ಲೇ ಅಪರೂಪ ಎಂಬಂತ ಮಳೆ. ಒಂದೂವರೆ ಗಂಟೆಯ ಬಿರುಸಿನ ಮಳೆಗೆ ಜಲ ಪ್ರವಾಹವೇ ಬಂದಿತ್ತು. ಹರಿಯಲು ಜಾಗವಿಲ್ಲದೆ ತಾನು ನುಗ್ಗಿದ್ದೇ ಕಣಿಯಾಯ್ತು, ತೋಡಾಯಿತು. ಸದ್ಯದಲ್ಲಿ ಇಷ್ಟು ಭಯಂಕರವಾದ ಮಳೆಯನ್ನು ನಾ ಕಂಡಿಲ್ಲ. ಸಂಜೆ ನಾಲ್ಕು ಗಂಟೆಗೇ ಮುಸ್ಸಂಜೆಯ ಏಳು ಗಂಟೆಯ ಕತ್ತಲು ಕೂಡ ಆವರಿಸಿತ್ತು. ಮಳೆಯ ಬಿರುಸು ಮತ್ತು ಸಿಡಿಲಿನ ಅಬ್ಬರ ಮನೆಯಿಂದ ಹೊರ ಇಣುಕದಂತೆ ತಡೆಹಿಡಿದಿತ್ತು.…..ಮುಂದೆ ಓದಿ….

Advertisement
Advertisement

ಇಂದು ಮಳೆ ಹಾನಿಯನ್ನು ವೀಕ್ಷಿಸುವ ಸಲುವಾಗಿ ತೋಟ, ಗದ್ದೆಗಳಿಗೆ ಸುತ್ತು ಒಂದು ಹೊಡೆದಾಯಿತು. ಅಲ್ಲಲ್ಲಿ ನುಗ್ಗಿದ ನೀರಿಗೆ ಎಷ್ಟೇ ಹುಲ್ಲಿದ್ದರೂ ಬೇರು ಸಹಿತ ಹುಲ್ಲನ್ನು ಕೊಚ್ಚಿ ಕೊಂಡು ಹೋದ ಕುರುಹು ಬಿಟ್ಟರೆ ಬೇರೆ ದೊಡ್ಡ ಅಪಾಯ ನಡೆದಿಲ್ಲ.

ತೆನೆ ಬಂದು ಹಸಿರಿನ ಚೆಲುವೇ ತಾನೆಂದು ಬೀಗುತ್ತಿದ್ದ ಬತ್ತದ ಪೈರು ಹೆಚ್ಚು ಕಮ್ಮಿ ಧರಾಷಾಹಿಯಾಗಿದೆ. ಕೆಲವೊಂದಷ್ಟು ನೆಲಕ್ಕೆ ಅಂಟಿಯು ಹೋಗಿದೆ. ಮಲಗಿದ ಪೈರಿನ ಮೇಲೆ ಮೂರಡಿಯ ಕೆಸರು ನೀರು ನಿಂತು ತನ್ನ ಅಟ್ಟಹಾಸವನ್ನು ಮೆರೆದು ಖಾಲಿಯಾಗಿತ್ತು. ಪೈರು ಸಂಪೂರ್ಣ ಕೆಂಬಣ್ಣಕ್ಕೆ ತಿರುಗಿತ್ತು. ಜಾನುವಾರಿನ ಮೇವಿಗೆ ಕಷ್ಟವೋ ಎನ್ನುವಂತಿದೆ.

ಭಾರತದ ಕೃಷಿ ಮುಂಗಾರು ಜೊತೆಗೆ ಹೋರಾಟ ಎಂಬುದು ಬಾಲ್ಯದಲ್ಲಿ ಕಲಿತ ಪಾಠ. ಹೌದು, ಎಷ್ಟು ನಿಜ ಅಲ್ಲವೇ? ಆ ಕಾಲ ಅನ್ನಕ್ಕಾಗಿ ಹೋರಾಟದ ಕಾಲ. ಯಾವುದೇ ಆರ್ಥಿಕ ಅನುಕೂಲಗಳು ಇಲ್ಲದಿದ್ದ ಕಾಲ. ಕನಿಷ್ಠ ಮೂಲ ಸೌಲಭ್ಯಗಳು ಇದ್ದ ಕಾಲ.ಮೇಲ್ಕರ್ಚಿಗೆ ಮಾತ್ರ ಅಡಿಕೆ ತೋಟ ಎಂಬ ಕಲ್ಪನೆಯ ಕಾಲ. ಆ ಕಾಲದಲ್ಲಿಯೂ ಇಂತ ಭಯಂಕರ ಮಳೆ ಬಂದು ನೆರೆ ನಿಂತು ಹಾಳು ಮಾಡಿದ್ದು ಎಷ್ಟೋ ಗದ್ದೆಗಳನ್ನು, ಕಟಾವು ಮಾಡಿ ಮನೆಯಂಗಳಕ್ಕೆ ತಂದು ಪೇರಿಸಿಟ್ಟ ಭತ್ತದ ಪೈರನ್ನು ಕೊಚ್ಚಿಕೊಂಡು ಹೋದದ್ದು ಅದೆಷ್ಟೋ, ಮಟ್ಟ ಮಾಡಿದ ಅಂಗಳವನ್ನು ಕುರುಹೇ ಇಲ್ಲದಂತೆ ಮಾಡಿದ್ದು ಅದೆಷ್ಟೋ!

Advertisement

ಇಷ್ಟೆಲ್ಲಾ ನಾಶ ಮಾಡಿದ್ದರೂ ಇದೆಲ್ಲವೂ ಮಾಮೂಲು, ದೇವರು ಕೊಟ್ಟಲ್ಲಿಗೆ ತೃಪ್ತಿ ಪಡಬೇಕೆಂದು ತೃಪ್ತಿಯ ಮುದ್ರೆಯೊತ್ತಿ ಕಷ್ಟಗಳನ್ನು ಮರೆಯುತ್ತಿದುದನ್ನು ನೆನೆಸುವಾಗ ನಮಗಿಂದು ಎಲ್ಲಾ ಅನುಕೂಲ ಇದ್ದು, ಆಧುನಿಕ ಸೌಲಭ್ಯಗಳಿದ್ದು, ಕೃಷಿ ಕಷ್ಟ ಮತ್ತು ಲಾಭ ರಹಿತ ಎಂದು ಕೃಷಿಯಿಂದ ವಿಮುಖ ರಾಗುವ ಮನಸ್ಥಿತಿಗೆ ಏನೆನ್ನಬೇಕು? ಕೇವಲ ಆರ್ಥಿಕ ಬೆಳೆಯನ್ನು ಮಾತ್ರ ಬೆಳೆದು ಸಮಸ್ಯೆ ಮತ್ತು ಪರಿಹಾರಗಳ ಜವಾಬ್ದಾರಿ ಮತ್ತೊಬ್ಬರದು ಎಂಬ ಮನಸ್ಥಿತಿಗೆ ಏನೆನ್ನಬೇಕು?

ಅಷ್ಟೊಂದು ಹೋರಾಟದ ಬದುಕಿನೊಂದಿಗೆ,ಶ್ರಮ ಜೀವನವನ್ನು ಹೇಳಿಕೊಟ್ಟ ಆ ಮಹಾ ಪೀಳಿಗೆಗೆ, ನಷ್ಟವನ್ನು ಲಾಭವನ್ನು ಒಂದೇರೀತಿ ಸ್ವೀಕರಿಸುತ್ತಿದ್ದ ಆ ಮಹಾ ಪೀಳಿಗೆಗೆ ನನ್ನದೊಂದು ನಮನಗಳು .

ಬರಹ :
ಸದಾಶಿವ ಮರಿಕೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

56 minutes ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

4 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

4 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

4 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

13 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

13 hours ago