Advertisement
Opinion

ಭಾರತದ ಕೃಷಿ ಮುಂಗಾರು ಜೊತೆಗೆ ಹೋರಾಟ..!| ಲಾಭ-ನಷ್ಟ ಸಮಾನವಾಗಿ ಸ್ವೀಕರಿಸಲು ಸಾಧ್ಯವೇ..?

Share

ನಿನ್ನೆಯ ದಿನ ಅಪರೂಪದಲ್ಲೇ ಅಪರೂಪ ಎಂಬಂತ ಮಳೆ. ಒಂದೂವರೆ ಗಂಟೆಯ ಬಿರುಸಿನ ಮಳೆಗೆ ಜಲ ಪ್ರವಾಹವೇ ಬಂದಿತ್ತು. ಹರಿಯಲು ಜಾಗವಿಲ್ಲದೆ ತಾನು ನುಗ್ಗಿದ್ದೇ ಕಣಿಯಾಯ್ತು, ತೋಡಾಯಿತು. ಸದ್ಯದಲ್ಲಿ ಇಷ್ಟು ಭಯಂಕರವಾದ ಮಳೆಯನ್ನು ನಾ ಕಂಡಿಲ್ಲ. ಸಂಜೆ ನಾಲ್ಕು ಗಂಟೆಗೇ ಮುಸ್ಸಂಜೆಯ ಏಳು ಗಂಟೆಯ ಕತ್ತಲು ಕೂಡ ಆವರಿಸಿತ್ತು. ಮಳೆಯ ಬಿರುಸು ಮತ್ತು ಸಿಡಿಲಿನ ಅಬ್ಬರ ಮನೆಯಿಂದ ಹೊರ ಇಣುಕದಂತೆ ತಡೆಹಿಡಿದಿತ್ತು.…..ಮುಂದೆ ಓದಿ….

ಇಂದು ಮಳೆ ಹಾನಿಯನ್ನು ವೀಕ್ಷಿಸುವ ಸಲುವಾಗಿ ತೋಟ, ಗದ್ದೆಗಳಿಗೆ ಸುತ್ತು ಒಂದು ಹೊಡೆದಾಯಿತು. ಅಲ್ಲಲ್ಲಿ ನುಗ್ಗಿದ ನೀರಿಗೆ ಎಷ್ಟೇ ಹುಲ್ಲಿದ್ದರೂ ಬೇರು ಸಹಿತ ಹುಲ್ಲನ್ನು ಕೊಚ್ಚಿ ಕೊಂಡು ಹೋದ ಕುರುಹು ಬಿಟ್ಟರೆ ಬೇರೆ ದೊಡ್ಡ ಅಪಾಯ ನಡೆದಿಲ್ಲ.

ತೆನೆ ಬಂದು ಹಸಿರಿನ ಚೆಲುವೇ ತಾನೆಂದು ಬೀಗುತ್ತಿದ್ದ ಬತ್ತದ ಪೈರು ಹೆಚ್ಚು ಕಮ್ಮಿ ಧರಾಷಾಹಿಯಾಗಿದೆ. ಕೆಲವೊಂದಷ್ಟು ನೆಲಕ್ಕೆ ಅಂಟಿಯು ಹೋಗಿದೆ. ಮಲಗಿದ ಪೈರಿನ ಮೇಲೆ ಮೂರಡಿಯ ಕೆಸರು ನೀರು ನಿಂತು ತನ್ನ ಅಟ್ಟಹಾಸವನ್ನು ಮೆರೆದು ಖಾಲಿಯಾಗಿತ್ತು. ಪೈರು ಸಂಪೂರ್ಣ ಕೆಂಬಣ್ಣಕ್ಕೆ ತಿರುಗಿತ್ತು. ಜಾನುವಾರಿನ ಮೇವಿಗೆ ಕಷ್ಟವೋ ಎನ್ನುವಂತಿದೆ.

ಭಾರತದ ಕೃಷಿ ಮುಂಗಾರು ಜೊತೆಗೆ ಹೋರಾಟ ಎಂಬುದು ಬಾಲ್ಯದಲ್ಲಿ ಕಲಿತ ಪಾಠ. ಹೌದು, ಎಷ್ಟು ನಿಜ ಅಲ್ಲವೇ? ಆ ಕಾಲ ಅನ್ನಕ್ಕಾಗಿ ಹೋರಾಟದ ಕಾಲ. ಯಾವುದೇ ಆರ್ಥಿಕ ಅನುಕೂಲಗಳು ಇಲ್ಲದಿದ್ದ ಕಾಲ. ಕನಿಷ್ಠ ಮೂಲ ಸೌಲಭ್ಯಗಳು ಇದ್ದ ಕಾಲ.ಮೇಲ್ಕರ್ಚಿಗೆ ಮಾತ್ರ ಅಡಿಕೆ ತೋಟ ಎಂಬ ಕಲ್ಪನೆಯ ಕಾಲ. ಆ ಕಾಲದಲ್ಲಿಯೂ ಇಂತ ಭಯಂಕರ ಮಳೆ ಬಂದು ನೆರೆ ನಿಂತು ಹಾಳು ಮಾಡಿದ್ದು ಎಷ್ಟೋ ಗದ್ದೆಗಳನ್ನು, ಕಟಾವು ಮಾಡಿ ಮನೆಯಂಗಳಕ್ಕೆ ತಂದು ಪೇರಿಸಿಟ್ಟ ಭತ್ತದ ಪೈರನ್ನು ಕೊಚ್ಚಿಕೊಂಡು ಹೋದದ್ದು ಅದೆಷ್ಟೋ, ಮಟ್ಟ ಮಾಡಿದ ಅಂಗಳವನ್ನು ಕುರುಹೇ ಇಲ್ಲದಂತೆ ಮಾಡಿದ್ದು ಅದೆಷ್ಟೋ!

ಇಷ್ಟೆಲ್ಲಾ ನಾಶ ಮಾಡಿದ್ದರೂ ಇದೆಲ್ಲವೂ ಮಾಮೂಲು, ದೇವರು ಕೊಟ್ಟಲ್ಲಿಗೆ ತೃಪ್ತಿ ಪಡಬೇಕೆಂದು ತೃಪ್ತಿಯ ಮುದ್ರೆಯೊತ್ತಿ ಕಷ್ಟಗಳನ್ನು ಮರೆಯುತ್ತಿದುದನ್ನು ನೆನೆಸುವಾಗ ನಮಗಿಂದು ಎಲ್ಲಾ ಅನುಕೂಲ ಇದ್ದು, ಆಧುನಿಕ ಸೌಲಭ್ಯಗಳಿದ್ದು, ಕೃಷಿ ಕಷ್ಟ ಮತ್ತು ಲಾಭ ರಹಿತ ಎಂದು ಕೃಷಿಯಿಂದ ವಿಮುಖ ರಾಗುವ ಮನಸ್ಥಿತಿಗೆ ಏನೆನ್ನಬೇಕು? ಕೇವಲ ಆರ್ಥಿಕ ಬೆಳೆಯನ್ನು ಮಾತ್ರ ಬೆಳೆದು ಸಮಸ್ಯೆ ಮತ್ತು ಪರಿಹಾರಗಳ ಜವಾಬ್ದಾರಿ ಮತ್ತೊಬ್ಬರದು ಎಂಬ ಮನಸ್ಥಿತಿಗೆ ಏನೆನ್ನಬೇಕು?

ಅಷ್ಟೊಂದು ಹೋರಾಟದ ಬದುಕಿನೊಂದಿಗೆ,ಶ್ರಮ ಜೀವನವನ್ನು ಹೇಳಿಕೊಟ್ಟ ಆ ಮಹಾ ಪೀಳಿಗೆಗೆ, ನಷ್ಟವನ್ನು ಲಾಭವನ್ನು ಒಂದೇರೀತಿ ಸ್ವೀಕರಿಸುತ್ತಿದ್ದ ಆ ಮಹಾ ಪೀಳಿಗೆಗೆ ನನ್ನದೊಂದು ನಮನಗಳು .

ಬರಹ :
ಸದಾಶಿವ ಮರಿಕೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

14 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago