#Chandrayaana | ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3 : ಜುಲೈ 14ಕ್ಕೆ ನಭಕ್ಕೆ ಚಿಮ್ಮಲಿದೆ ಚಂದ್ರನ ಪರಿಶೋಧನಾ ಮಿಷನ್

July 13, 2023
12:24 PM
ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಪರಿಶೋಧನಾ ಮಿಷನ್ ಚಂದ್ರಯಾನ-3 ಗೆ ಕೌಂಟ್‌ಡೌನ್ ಶುರು, ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು
ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಪರಿಶೋಧನಾ ಮಿಷನ್ ಚಂದ್ರಯಾನ-3 ಗೆ#Chandrayaan-3 ಇಂದಿನಿಂದ ಕೌಂಟ್‌ಡೌನ್ ಶುರುವಾಗಲಿದೆ. ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಇಸ್ರೋ ವಿಜ್ಞಾನಿಗಳು ಪೂಜೆ ಸಲ್ಲಿಸಿದ್ದಾರೆ.

Advertisement

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ #ISRO ಇಂದು (ಜುಲೈ 13 ರಂದು) ಮಧ್ಯಾಹ್ನ 1.05 ಕ್ಕೆ 26 ಗಂಟೆಗಳ ಕೌಂಟ್‌ಡೌನ್ ಪ್ರಾರಂಭವಾಗಲಿದೆ ಎಂದು ಹೇಳಿದೆ. ನಾಳೆ (ಜುಲೈ 14 ರಂದು) ಮಧ್ಯಾಹ್ನ 2.35 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಉಡಾವಣೆವಾಗಲಿದೆ ಎಂದು ಹೇಳಲಾಗಿದೆ. ಚಂದ್ರಯಾನ-3 ಕಾರ್ಯಾಚರಣೆ ಚಂದ್ರನ ಕಡೆ ಸಾಗುತ್ತಿರುವ ಭಾರತದ ಮೂರನೇ ಪ್ರಯತ್ನವಾಗಿದೆ. ಜತೆಗೆ ಇದು ರಾಷ್ಟ್ರದ ಬಾಹ್ಯಾಕಾಶ ಪರಿಶೋಧನೆಯಲ್ಲಿ ಮಹತ್ವಾಕಾಂಕ್ಷೆಯ ಸಾಧನೆಯಾಗಿದೆ. ಈಗಾಗಲೇ ಚಂದ್ರಯಾನ-3ಯ ಎಲ್ಲ ಕಾರ್ಯತಂತ್ರಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಭಾರತವು ಚಂದ್ರನಲ್ಲಿ ತನ್ನ ಮಿಷನ್​ನ್ನು ಸುರಕ್ಷಿತ ಲ್ಯಾಂಡಿಂಗ್ ಮಾಡುವ ನಾಲ್ಕನೇ ರಾಷ್ಟ್ರವಾಗಲಿದೆ, ಬಾಹ್ಯಾಕಾಶ ಸಂಶೋಧನೆಯ ಕ್ಷೇತ್ರದಲ್ಲಿ ಭಾರತ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಈ ಮೂಲಕ ಪ್ರದರ್ಶಿಸುತ್ತಿದೆ.

ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳ#ISRO scientists ತಂಡವು ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ#Tirupati Venkatachalapathy Temple ಆಗಮಿಸಿ ಈ ಯೋಜನೆ ಯಶಸ್ವಿ ಆಗಲಿ ಎಂದು ಪ್ರಾರ್ಥಿಸಿತು. ಚಂದ್ರಯಾನ 3 ಉಡಾವಣೆಯ ಮುನ್ನಾ ದಿನವಾದ ಇಂದು ಮುಂಜಾನೆ ಇಸ್ರೋದ ವೈಜ್ಞಾನಿಕ ಕಾರ್ಯದರ್ಶಿ ಶಾಂತನು ಭಟ್ವಾಡೇಕರ್ ಜೊತೆ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಮಾದರಿಯೊಂದಿಗೆ ಆಗಮಿಸಿ ಪ್ರಾರ್ಥನೆ ಮಾಡಿದರು.

LVM3 ರಾಕೆಟ್ ಉಡಾವಣೆಯಾದ ಸರಿಸುಮಾರು 16 ನಿಮಿಷಗಳ ನಂತರ, ಪ್ರೊಪಲ್ಷನ್ ಮಾಡ್ಯೂಲ್ ಮುಖ್ಯ ರಾಕೆಟ್‌ನಿಂದ ಪ್ರತ್ಯೇಕಗೊಳ್ಳುತ್ತದೆ. ನಂತರ ಅದರಿಂದ ಅಂಡಾಕಾರದ ಚಕ್ರ ಹೊರಗೆ ಬಂದು, ಭೂಮಿಯ ಸುತ್ತ 5 ರಿಂದ 6 ಬಾರಿ ಸುತ್ತುತ್ತದೆ. ಭೂಮಿಯಿಂದ 36,500 ಕಿಮೀ ದೂರದಿಂದ ಸಾಗಿ, ಕ್ರಮೇಣ ಚಂದ್ರನ ಕಕ್ಷೆಯತ್ತ ಬರುತ್ತದೆ. ಇದು ಹೀಗೆ ಪ್ರಯಾಣ ನಡೆಸುತ್ತ ಚಂದ್ರನ ಮೇಲ್ಮೈಯಿಂದ 100 ಕಿಮೀ ಎತ್ತರವನ್ನು ತಲುಪುವವರೆಗೆ ಅದೇ ಸ್ಥಿರವಾದ ವೇಗವನ್ನು ಹೊಂದಿರುತ್ತದೆ.
ತನ್ನ ಸ್ಥಾನವನ್ನು ತಲುಪಿದ ನಂತರ, ಲ್ಯಾಂಡರ್ ಮಾಡ್ಯೂಲ್ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ಲ್ಯಾಂಡಿಂಗ್​​ ಆಗಲು ಶುರು ಮಾಡುತ್ತದೆ. ಈ ಪ್ರಕ್ರಿಯೆ ಈ ತಿಂಗಳ 23 ಅಥವಾ 24ರ ತನಕ ನಡೆಯಲಿದೆ ಎಂದು ಹೇಳಲಾಗಿದೆ. ಈ ಚಂದ್ರಯಾನ-3 ಮಿಷನ್‌ನ ಪ್ರಾಥಮಿಕ ಉದ್ದೇಶವೇನೆಂದರೆ, ಚಂದ್ರನ ಕಕ್ಷೆಯಿಂದ ಭೂಮಿಯನ್ನು ಅಧ್ಯಯನ ಮಾಡುವುದು ಮತ್ತು ಅದರ ಸಾಂದ್ರತೆಯ ಬದಲಾವಣೆಗಳನ್ನು ಅಳೆಯುವುದು, ಜತೆಗೆ ಧ್ರುವ ಪ್ರದೇಶದಲ್ಲಿನ ಚಂದ್ರನ ಮೇಲ್ಮೈಯ ಉಷ್ಣ ಗುಣಲಕ್ಷಣಗಳನ್ನು ವಿಶ್ಲೇಷಿಸುವುದು. ಇದು ಲ್ಯಾಂಡಿಂಗ್ ಆದ್ಮೇಲೆ ಚಂದ್ರನ ಸುತ್ತಲೂ ಭೂಕಂಪನ ಚಟುವಟಿಕೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತದೆ, ಇದರ ಜತೆಗೆ ಇದು ಚಂದ್ರನ ಹೊರಪದರ ಮತ್ತು ನಿಲುವಂಗಿಯ ರಚನೆಯ ಒಳನೋಟಗಳನ್ನು ನೀಡುತ್ತದೆ.

-ಅಂತರ್ಜಾಲ ಸಂಗ್ರಹ

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror